ಗ್ರಾಮದ ಬೈರೋನಾಥ ದೇವಸ್ಥಾನಕ್ಕೆ ಸೇರಿದ ಜಮೀನು ಉಳಿಸಲು ಸತೀಶ ಪಾಟೀಲ (37) ಅವರು ಹೋರಾಟ ನಡೆಸಿದ್ದರು. ಶನಿವಾರ ತಡರಾತ್ರಿ ಅವರ ಕೊಲೆಯಾದ ಕಾರಣ ಹಿಂಸಾಚಾರ ಭುಗಿಲೆದ್ದಿತು. ಇದರಲ್ಲಿ ನಾಲ್ಕು ಕಾರು, ಒಂದು ಟ್ರ್ಯಾಕ್ಟರ್, ಎರಡು ಟೆಂಪೊ,ಹುಲ್ಲಿನ ಬಣವೆಗೆ ಬೆಂಕಿ ಹಚ್ಚಲಾಗಿದೆ. ಗ್ರಾಮದ ಹಲವು ಮನೆಗಳ ಮೇಲೆ ಕಲ್ಲು ತೂರಾಟ ಕೂಡ ನಡೆಯಿತು.