<p><strong>ಬೆಳಗಾವಿ</strong>: ‘ಸನಾತನ ಹಿಂದೂ ಧರ್ಮದ ಸಂಸ್ಕೃತಿ, ತತ್ವಗಳು ಮಾದರಿಯಾಗಿವೆ. ಹೀಗಾಗಿ ಹಿಂದೂ ಧರ್ಮ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಧರ್ಮವಾಗಿದೆ’ ಎಂದು ಬೆಂಗಳೂರು ಗವಿಪುರಂ ಗೋಸಾಯಿ ಮಹಾಸಂಸ್ಥಾನ ಮಠದ ಮರಾಠ ಸಮಾಜದ ಸದ್ಗುರು ಮಂಜುನಾಥ ಭಾರತೀ ಸ್ವಾಮೀಜಿ ಹೇಳಿದರು.</p>.<p>ಹಿಂದೂ ಸಮ್ಮೇಳನ ಸಮಿತಿ ವತಿಯಿಂದ ಇಲ್ಲಿನ ಖಡೇ ಬಜಾರ್ನಲ್ಲಿ ಮಂಗಳವಾರ ಆಯೋಜಿಸಿದ್ದ ವಿರಾಟ್ ಹಿಂದೂ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ಹಿಂದೂ ಧರ್ಮದಲ್ಲಿ ಎಲ್ಲರಿಗೂ ಗೌರವ, ರಕ್ಷಣೆ ಸಿಗುತ್ತದೆ. ಧರ್ಮ ಮನುಷ್ಯನ ಜೀವನವನ್ನು ಶುದ್ಧಗೊಳಿಸುತ್ತದೆ. ಸನಾತನ ಧರ್ಮ ಶಾಶ್ವತವಾಗಿದೆ. ಭಗವದ್ಗೀತೆಯಲ್ಲಿ ಧರ್ಮ ರಕ್ಷಣೆಯ ಸಾಮರ್ಥ್ಯವಿದೆ. ಅದರಲ್ಲಿನ ಪ್ರತಿಯೊಂದು ಅಧ್ಯಾಯ ಜೀವನಕ್ಕೆ ದಾರಿ ತೋರುತ್ತದೆ’ ಎಂದರು.</p>.<p>‘ಸನಾತನ ಧರ್ಮವನ್ನೇ ಮೈಗೂಡಿಸಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರು ಶತ್ರುಗಳ ಸ್ತ್ರೀಯರಿಗೂ ಗೌರವ ನೀಡುತ್ತಿದ್ದರು. ಹೀಗಾಗಿಯೇ 399 ವರ್ಷ ಕಳೆದರೂ ಛತ್ರಪತಿ ಶಿವಾಜಿ ಮಹಾರಾಜರ ಬದುಕಿನ ಶಿಸ್ತು, ಗುಣಗಳು ಇಂದಿಗೂ ಸ್ಮರಣಿಯವಾಗಿವೆ’ ಎಂದರು.</p>.<p>ನಿವೃತ್ತ ಪ್ರಾಚಾರ್ಯೆ ಅರುಣಾ ನಾಯಕ ಮಾತನಾಡಿ, ‘ಹಿಂದೂ ಧರ್ಮದ ಮೇಲೆ ಸಾಕಷ್ಟು ಅನ್ಯಾಯ, ದೌರ್ಜನ್ಯಗಳು ನಡೆದಿವೆ. ಹೀಗಾಗಿ ಧರ್ಮ ರಕ್ಷಣೆಗಾಗಿ ನಮ್ಮ ಪೂರ್ವಜರು ಪ್ರಾಣತ್ಯಾಗ ಮಾಡಿದ್ದಾರೆ. ಪ್ರತಿಯೊಬ್ಬರಲ್ಲಿ ದೇಶಭಕ್ತಿ ಇರಬೇಕು. ನಮ್ಮ ಸಂಸ್ಕೃತಿ ರಕ್ಷಣೆಗೆ ಆದ್ಯತೆ ನೀಡಬೇಕು’ ಎಂದರು.</p>.<p>ಶಿವಚರಿತ್ರಕಾರ ಶಿವರತ್ನ ಶೇಟೆ, ಸಮಿತಿ ಅಧ್ಯಕ್ಷ ದಿಗಂಬರ ಪವಾರ, ಉಪಾಧ್ಯಕ್ಷ ಕಿಶೋರಿ ಕುರಣಿ, ಅನಿಲ್ ಅಷ್ಟೇಕರ, ಗೌತಮಿ ಜಾಧವ, ಪ್ರಕಾಶ ಹಲಗೇಕರ್, ಸೀಮಾ ತಿಳವೆ, ಗಜಾನನ ಮಿಸಾಲೆ, ಗಂಗಧರ ಪಾಟೀಲ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಸನಾತನ ಹಿಂದೂ ಧರ್ಮದ ಸಂಸ್ಕೃತಿ, ತತ್ವಗಳು ಮಾದರಿಯಾಗಿವೆ. ಹೀಗಾಗಿ ಹಿಂದೂ ಧರ್ಮ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಧರ್ಮವಾಗಿದೆ’ ಎಂದು ಬೆಂಗಳೂರು ಗವಿಪುರಂ ಗೋಸಾಯಿ ಮಹಾಸಂಸ್ಥಾನ ಮಠದ ಮರಾಠ ಸಮಾಜದ ಸದ್ಗುರು ಮಂಜುನಾಥ ಭಾರತೀ ಸ್ವಾಮೀಜಿ ಹೇಳಿದರು.</p>.<p>ಹಿಂದೂ ಸಮ್ಮೇಳನ ಸಮಿತಿ ವತಿಯಿಂದ ಇಲ್ಲಿನ ಖಡೇ ಬಜಾರ್ನಲ್ಲಿ ಮಂಗಳವಾರ ಆಯೋಜಿಸಿದ್ದ ವಿರಾಟ್ ಹಿಂದೂ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ಹಿಂದೂ ಧರ್ಮದಲ್ಲಿ ಎಲ್ಲರಿಗೂ ಗೌರವ, ರಕ್ಷಣೆ ಸಿಗುತ್ತದೆ. ಧರ್ಮ ಮನುಷ್ಯನ ಜೀವನವನ್ನು ಶುದ್ಧಗೊಳಿಸುತ್ತದೆ. ಸನಾತನ ಧರ್ಮ ಶಾಶ್ವತವಾಗಿದೆ. ಭಗವದ್ಗೀತೆಯಲ್ಲಿ ಧರ್ಮ ರಕ್ಷಣೆಯ ಸಾಮರ್ಥ್ಯವಿದೆ. ಅದರಲ್ಲಿನ ಪ್ರತಿಯೊಂದು ಅಧ್ಯಾಯ ಜೀವನಕ್ಕೆ ದಾರಿ ತೋರುತ್ತದೆ’ ಎಂದರು.</p>.<p>‘ಸನಾತನ ಧರ್ಮವನ್ನೇ ಮೈಗೂಡಿಸಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರು ಶತ್ರುಗಳ ಸ್ತ್ರೀಯರಿಗೂ ಗೌರವ ನೀಡುತ್ತಿದ್ದರು. ಹೀಗಾಗಿಯೇ 399 ವರ್ಷ ಕಳೆದರೂ ಛತ್ರಪತಿ ಶಿವಾಜಿ ಮಹಾರಾಜರ ಬದುಕಿನ ಶಿಸ್ತು, ಗುಣಗಳು ಇಂದಿಗೂ ಸ್ಮರಣಿಯವಾಗಿವೆ’ ಎಂದರು.</p>.<p>ನಿವೃತ್ತ ಪ್ರಾಚಾರ್ಯೆ ಅರುಣಾ ನಾಯಕ ಮಾತನಾಡಿ, ‘ಹಿಂದೂ ಧರ್ಮದ ಮೇಲೆ ಸಾಕಷ್ಟು ಅನ್ಯಾಯ, ದೌರ್ಜನ್ಯಗಳು ನಡೆದಿವೆ. ಹೀಗಾಗಿ ಧರ್ಮ ರಕ್ಷಣೆಗಾಗಿ ನಮ್ಮ ಪೂರ್ವಜರು ಪ್ರಾಣತ್ಯಾಗ ಮಾಡಿದ್ದಾರೆ. ಪ್ರತಿಯೊಬ್ಬರಲ್ಲಿ ದೇಶಭಕ್ತಿ ಇರಬೇಕು. ನಮ್ಮ ಸಂಸ್ಕೃತಿ ರಕ್ಷಣೆಗೆ ಆದ್ಯತೆ ನೀಡಬೇಕು’ ಎಂದರು.</p>.<p>ಶಿವಚರಿತ್ರಕಾರ ಶಿವರತ್ನ ಶೇಟೆ, ಸಮಿತಿ ಅಧ್ಯಕ್ಷ ದಿಗಂಬರ ಪವಾರ, ಉಪಾಧ್ಯಕ್ಷ ಕಿಶೋರಿ ಕುರಣಿ, ಅನಿಲ್ ಅಷ್ಟೇಕರ, ಗೌತಮಿ ಜಾಧವ, ಪ್ರಕಾಶ ಹಲಗೇಕರ್, ಸೀಮಾ ತಿಳವೆ, ಗಜಾನನ ಮಿಸಾಲೆ, ಗಂಗಧರ ಪಾಟೀಲ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>