<p><strong>ಬೆಳಗಾವಿ:</strong> ಸಪ್ತ ನದಿಗಳು ಹರಿಯುವ ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷದ ಬೇಸಿಗೆಯಲ್ಲೂ ಕುಡಿಯುವ ನೀರಿನ ಬವಣೆಯ ಬಿಸಿ ತಟ್ಟಲಿದೆ.</p>.<p>ಅದರಲ್ಲೂ, ಹಿಪ್ಪರಗಿ ಬ್ಯಾರೇಜ್ನ 22ನೇ ಗೇಟ್ ಮುರಿದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದು ಹೋಗಿದ್ದರಿಂದ 100ಕ್ಕೂ ಅಧಿಕ ಹಳ್ಳಿಗಳ ಪರಿಸ್ಥಿತಿ ಅಂತೂ ಬಿಗಡಾಯಿಸಲಿದೆ.</p>.<p>ಕಳೆದೊಂದು ವಾರದಿಂದ ಬೆಳಗಾವಿ ನಗರದ ಆಸುಪಾಸಿನಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಆದರೆ, ಜಿಲ್ಲೆಯ ಬಹುಪಾಲು ಕಡೆ ಮಳೆಯಾಗಿಲ್ಲ. ಹಾಗಾಗಿ ವಿವಿಧ ಜಲಮೂಲಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಮಲಪ್ರಭಾ, ಘಟಪ್ರಭಾ, ಕೃಷ್ಣಾ ನದಿಗಳ ಒಡಲು ಬರಿದಾಗುತ್ತಿರುವುದು ಜನರಿಗೆ ಸಂಕಷ್ಟ ತಂದಿಟ್ಟಿದೆ.</p>.<p>ಬೆಳಗಾವಿ ಉಪವಿಭಾಗದಲ್ಲಿ 33, ಚಿಕ್ಕೋಡಿ ಉಪವಿಭಾಗದಲ್ಲಿ 153 ಸೇರಿ ಇಡೀ ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಿಂದ ಬಾಧಿತವಾಗಬಹುದಾದ 186 ಗ್ರಾಮಗಳ ಪಟ್ಟಿಯನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಿದ್ಧಪಡಿಸಿ, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದೆ.</p>.<p>ಅದನ್ನು ಆಧರಿಸಿ ಗ್ರಾಮಸ್ಥರಿಗೆ ನೀರು ಪೂರೈಸಲು 345 ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆಯಾ ಗ್ರಾಮದಲ್ಲಿನ 85 ಖಾಸಗಿ ಕೊಳವೆಬಾವಿ ಬಾಡಿಗೆಗೆ ಪಡೆಯಲು ಗುರುತಿಸಲಾಗಿದೆ.</p>.<p>ಒಂದೂವರೆ ಟಿಎಂಸಿ ಅಡಿ ಕಡಿಮೆ: ಹಿಪ್ಪರಗಿ ಬ್ಯಾರೇಜ್ ಮೇಲ್ಭಾಗದಲ್ಲಿ 12 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿದ್ದು, ಅವುಗಳ ಮೂಲಕ ಅಥಣಿ, ರಾಯಬಾಗ ಮತ್ತು ಚಿಕ್ಕೋಡಿ ತಾಲ್ಲೂಕುಗಳ 100 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ.</p>.<p>ಹಿಪ್ಪರಗಿ ಬ್ಯಾರೇಜ್ ಕೆಳಭಾಗದಲ್ಲಿ ಇರುವ ಕಕಮರಿ ಬಹುಗ್ರಾಮ ಯೋಜನೆ 14 ಗ್ರಾಮಗಳ ಜನರ ದಾಹ ನೀಗಿಸುತ್ತಿದೆ.</p>.<p>ಇದಲ್ಲದೆ, ಸವದಿ, ಝುಂಜರವಾಡ, ಶಿರಹಟ್ಟಿ, ಬಳವಾಡ ಏಕಗ್ರಾಮ ಕುಡಿಯುವ ನೀರು ಯೋಜನೆ ಚಾಲ್ತಿಯಲ್ಲಿವೆ.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಹಿಪ್ಪರಗಿ ಬ್ಯಾರೇಜ್ನಲ್ಲಿ ಒಂದೂವರೆ ಟಿಎಂಸಿ ಅಡಿ ನೀರು ಕಡಿಮೆ ಸಂಗ್ರಹವಿದೆ. ಕೃಷ್ಣಾನದಿ ಬರಿದಾಗುತ್ತಿದ್ದು, ಹಿಪ್ಪರಗಿ ಬ್ಯಾರೇಜ್ ಅನ್ನೇ ನೆಚ್ಚಿಕೊಂಡಿದ್ದ ಯೋಜನೆಗಳು ಸ್ಥಗಿತವಾಗುವ ಆತಂಕ ಎದುರಾಗಿದೆ. ಕೃಷ್ಣಾ ನದಿಪಾತ್ರದಲ್ಲಿನ ಬೇರೆ ಗ್ರಾಮಗಳಲ್ಲೂ ಪರಿಸ್ಥಿತಿ ಹೇಳಿಕೊಳ್ಳುವಂತಿಲ್ಲ. ಹಾಗಾಗಿ ಮಹಾರಾಷ್ಟ್ರದಿಂದ ಕೃಷ್ಣಾನದಿಗೆ ತ್ವರಿತವಾಗಿ ಒಂದು ಟಿಎಂಸಿ ಅಡಿ ನೀರು ಬಿಡುಗಡೆಗೊಳಿಸಬೇಕು ಎಂದು ಕೃಷ್ಣಾ ನದಿಪಾತ್ರದ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.</p>.<div><blockquote>ರಾಜ್ಯದ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ಕೊಡಲಿದ್ದು, ಅಲ್ಲಿಂದ ಕೃಷ್ಣಾನದಿಗೆ ನೀರು ಬಿಡುಗಡೆಗೆ ಪ್ರಯತ್ನಿಸಲಾಗುವುದು </blockquote><span class="attribution">ಸತೀಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಸಪ್ತ ನದಿಗಳು ಹರಿಯುವ ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷದ ಬೇಸಿಗೆಯಲ್ಲೂ ಕುಡಿಯುವ ನೀರಿನ ಬವಣೆಯ ಬಿಸಿ ತಟ್ಟಲಿದೆ.</p>.<p>ಅದರಲ್ಲೂ, ಹಿಪ್ಪರಗಿ ಬ್ಯಾರೇಜ್ನ 22ನೇ ಗೇಟ್ ಮುರಿದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದು ಹೋಗಿದ್ದರಿಂದ 100ಕ್ಕೂ ಅಧಿಕ ಹಳ್ಳಿಗಳ ಪರಿಸ್ಥಿತಿ ಅಂತೂ ಬಿಗಡಾಯಿಸಲಿದೆ.</p>.<p>ಕಳೆದೊಂದು ವಾರದಿಂದ ಬೆಳಗಾವಿ ನಗರದ ಆಸುಪಾಸಿನಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಆದರೆ, ಜಿಲ್ಲೆಯ ಬಹುಪಾಲು ಕಡೆ ಮಳೆಯಾಗಿಲ್ಲ. ಹಾಗಾಗಿ ವಿವಿಧ ಜಲಮೂಲಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಮಲಪ್ರಭಾ, ಘಟಪ್ರಭಾ, ಕೃಷ್ಣಾ ನದಿಗಳ ಒಡಲು ಬರಿದಾಗುತ್ತಿರುವುದು ಜನರಿಗೆ ಸಂಕಷ್ಟ ತಂದಿಟ್ಟಿದೆ.</p>.<p>ಬೆಳಗಾವಿ ಉಪವಿಭಾಗದಲ್ಲಿ 33, ಚಿಕ್ಕೋಡಿ ಉಪವಿಭಾಗದಲ್ಲಿ 153 ಸೇರಿ ಇಡೀ ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಿಂದ ಬಾಧಿತವಾಗಬಹುದಾದ 186 ಗ್ರಾಮಗಳ ಪಟ್ಟಿಯನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಿದ್ಧಪಡಿಸಿ, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದೆ.</p>.<p>ಅದನ್ನು ಆಧರಿಸಿ ಗ್ರಾಮಸ್ಥರಿಗೆ ನೀರು ಪೂರೈಸಲು 345 ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆಯಾ ಗ್ರಾಮದಲ್ಲಿನ 85 ಖಾಸಗಿ ಕೊಳವೆಬಾವಿ ಬಾಡಿಗೆಗೆ ಪಡೆಯಲು ಗುರುತಿಸಲಾಗಿದೆ.</p>.<p>ಒಂದೂವರೆ ಟಿಎಂಸಿ ಅಡಿ ಕಡಿಮೆ: ಹಿಪ್ಪರಗಿ ಬ್ಯಾರೇಜ್ ಮೇಲ್ಭಾಗದಲ್ಲಿ 12 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿದ್ದು, ಅವುಗಳ ಮೂಲಕ ಅಥಣಿ, ರಾಯಬಾಗ ಮತ್ತು ಚಿಕ್ಕೋಡಿ ತಾಲ್ಲೂಕುಗಳ 100 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ.</p>.<p>ಹಿಪ್ಪರಗಿ ಬ್ಯಾರೇಜ್ ಕೆಳಭಾಗದಲ್ಲಿ ಇರುವ ಕಕಮರಿ ಬಹುಗ್ರಾಮ ಯೋಜನೆ 14 ಗ್ರಾಮಗಳ ಜನರ ದಾಹ ನೀಗಿಸುತ್ತಿದೆ.</p>.<p>ಇದಲ್ಲದೆ, ಸವದಿ, ಝುಂಜರವಾಡ, ಶಿರಹಟ್ಟಿ, ಬಳವಾಡ ಏಕಗ್ರಾಮ ಕುಡಿಯುವ ನೀರು ಯೋಜನೆ ಚಾಲ್ತಿಯಲ್ಲಿವೆ.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಹಿಪ್ಪರಗಿ ಬ್ಯಾರೇಜ್ನಲ್ಲಿ ಒಂದೂವರೆ ಟಿಎಂಸಿ ಅಡಿ ನೀರು ಕಡಿಮೆ ಸಂಗ್ರಹವಿದೆ. ಕೃಷ್ಣಾನದಿ ಬರಿದಾಗುತ್ತಿದ್ದು, ಹಿಪ್ಪರಗಿ ಬ್ಯಾರೇಜ್ ಅನ್ನೇ ನೆಚ್ಚಿಕೊಂಡಿದ್ದ ಯೋಜನೆಗಳು ಸ್ಥಗಿತವಾಗುವ ಆತಂಕ ಎದುರಾಗಿದೆ. ಕೃಷ್ಣಾ ನದಿಪಾತ್ರದಲ್ಲಿನ ಬೇರೆ ಗ್ರಾಮಗಳಲ್ಲೂ ಪರಿಸ್ಥಿತಿ ಹೇಳಿಕೊಳ್ಳುವಂತಿಲ್ಲ. ಹಾಗಾಗಿ ಮಹಾರಾಷ್ಟ್ರದಿಂದ ಕೃಷ್ಣಾನದಿಗೆ ತ್ವರಿತವಾಗಿ ಒಂದು ಟಿಎಂಸಿ ಅಡಿ ನೀರು ಬಿಡುಗಡೆಗೊಳಿಸಬೇಕು ಎಂದು ಕೃಷ್ಣಾ ನದಿಪಾತ್ರದ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.</p>.<div><blockquote>ರಾಜ್ಯದ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ಕೊಡಲಿದ್ದು, ಅಲ್ಲಿಂದ ಕೃಷ್ಣಾನದಿಗೆ ನೀರು ಬಿಡುಗಡೆಗೆ ಪ್ರಯತ್ನಿಸಲಾಗುವುದು </blockquote><span class="attribution">ಸತೀಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>