<p><strong>ಬೆಳಗಾವಿ:</strong> ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಸುಗಮವಾಗಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸಲು ಜಿಲ್ಲಾಡಳಿತದ ವತಿಯಿಂದ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.</p><p>ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಮಂಗಳವಾರ ಭೇಟಿ ನೀಡಿ, ಅಧಿವೇಶನದ ಸಿದ್ಧತೆ ಪರಿಶಿಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>‘ಕಳೆದ ವರ್ಷ ಉತ್ತಮವಾಗಿ ಅಧಿವೇಶನ ನಡೆದಿತ್ತು. ಈ ಬಾರಿಯೂ ಯಾವುದೇ ಸಮಸ್ಯೆಯಾಗದು. ವಿವಿಧ ಇಲಾಖೆಗಳ ಮುಖ್ಯಸ್ಥರ ಜತೆ ಚರ್ಚಿಸಿ ಅಗತ್ಯ ಕ್ರಮ ವಹಿಸಿದ್ದೇವೆ’ ಎಂದರು.</p><p>‘ಅಧಿವೇಶನ ಹಿನ್ನೆಲೆಯಲ್ಲಿ ವಸತಿಗಾಗಿ 3 ಸಾವಿರ ಕೊಠಡಿ ಕಾಯ್ದಿರಿಸಿದ್ದೇವೆ. 700 ವಾಹನ ಬಳಸಿಕೊಳ್ಳಲಿದ್ದೇವೆ. ಲೋಕೋಪಯೋಗಿ ಇಲಾಖೆಯಿಂದ ಬೃಹತ್ ಆಕಾರದ ರಾಷ್ಟ್ರಧ್ವಜ ಪ್ರದರ್ಶಿಸಲಿದ್ದೇವೆ’ ಎಂದು ಹೇಳಿದರು.</p><p><strong>ಪಾರ್ಕ್ ಉದ್ಘಾಟನೆ</strong></p><p>‘ಲೋಕೋಪಯೋಗಿ ಇಲಾಖೆ ₹4.5 ಕೋಟಿ ವೆಚ್ಚದಲ್ಲಿ ಸೌಧದ ಆವರಣದಲ್ಲಿ ನಿರ್ಮಿಸಿದ ಪಾರ್ಕ್ ಅನ್ನು ಇದೇ ಅಧಿವೇಶನದಲ್ಲಿ ಉದ್ಘಾಟಿಸಲಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ವಿವಿಧ ರೀತಿಯ ಕಾರಂಜಿ ಒಳಗೊಂಡ ಪಾರ್ಕ್ಗೆ ಜನರು ಭೇಟಿ ನೀಡಿ ನಿರಾಳರಾಗಬಹುದು’ ಎಂದು ತಿಳಿಸಿದರು.</p><p><strong>ಪ್ರತಿಭಟನೆ ತಗ್ಗುವ ನಿರೀಕ್ಷೆ</strong></p><p>‘ಅಧಿವೇಶನ ವೇಳೆ ಪ್ರತಿಭಟನೆ ನಡೆಸುವವರಿಗಾಗಿ ಎರಡು ಕಡೆ ವ್ಯವಸ್ಥೆ ಮಾಡಿದ್ದೇವೆ. ಮೆಕ್ಕೆಜೋಳ, ಕಬ್ಬು ಬೆಳೆಯುವವರ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ವಿವಿಧ ಸಂಘ–ಸಂಸ್ಥೆಗಳ ಜತೆಗೆ ನಗರ ಪೊಲೀಸ್ ಆಯುಕ್ತರು ಸಭೆ ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ಪ್ರತಿಭಟನೆಗಳ ಸಂಖ್ಯೆ ತಗ್ಗುವ ನಿರೀಕ್ಷೆ ಇದೆ’ ಎಂದರು.</p><p>‘ಪ್ರತಿಭಟನೆಗೆ ನಮ್ಮ ಆಕ್ಷೇಪವಿಲ್ಲ. ಆದರೆ, ಯಾರೂ ಪ್ರತಿಭಟನೆ ನಡೆಸುವ ಮುನ್ನ, ಜಿಲ್ಲಾಧಿಕಾರಿ ಕಚೇರಿ ಮತ್ತು ನಗರ ಪೊಲೀಸ್ ಕಮಿಷನರ್ ಕಚೇರಿಗೆ ತಿಳಿಸಬೇಕು’ ಎಂದು ಹೇಳಿದರು.</p><p>ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮತ್ತಿತರರು ಹಾಜರಿದ್ದರು.</p><p><strong>‘ಮಹಾಮೇಳಾವ್ಗೆ ಅನುಮತಿ ಕೊಡುವುದಿಲ್ಲ’</strong></p><p>‘ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿಗೆ(ಎಂಇಎಸ್) ಯಾವ ಕಾರಣಕ್ಕೂ ಅನುಮತಿ ಕೊಡುವುದಿಲ್ಲ. ಒಂದುವೇಳೆ ಮಹಾಮೇಳಾವ್ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಸುಗಮವಾಗಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸಲು ಜಿಲ್ಲಾಡಳಿತದ ವತಿಯಿಂದ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.</p><p>ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಮಂಗಳವಾರ ಭೇಟಿ ನೀಡಿ, ಅಧಿವೇಶನದ ಸಿದ್ಧತೆ ಪರಿಶಿಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>‘ಕಳೆದ ವರ್ಷ ಉತ್ತಮವಾಗಿ ಅಧಿವೇಶನ ನಡೆದಿತ್ತು. ಈ ಬಾರಿಯೂ ಯಾವುದೇ ಸಮಸ್ಯೆಯಾಗದು. ವಿವಿಧ ಇಲಾಖೆಗಳ ಮುಖ್ಯಸ್ಥರ ಜತೆ ಚರ್ಚಿಸಿ ಅಗತ್ಯ ಕ್ರಮ ವಹಿಸಿದ್ದೇವೆ’ ಎಂದರು.</p><p>‘ಅಧಿವೇಶನ ಹಿನ್ನೆಲೆಯಲ್ಲಿ ವಸತಿಗಾಗಿ 3 ಸಾವಿರ ಕೊಠಡಿ ಕಾಯ್ದಿರಿಸಿದ್ದೇವೆ. 700 ವಾಹನ ಬಳಸಿಕೊಳ್ಳಲಿದ್ದೇವೆ. ಲೋಕೋಪಯೋಗಿ ಇಲಾಖೆಯಿಂದ ಬೃಹತ್ ಆಕಾರದ ರಾಷ್ಟ್ರಧ್ವಜ ಪ್ರದರ್ಶಿಸಲಿದ್ದೇವೆ’ ಎಂದು ಹೇಳಿದರು.</p><p><strong>ಪಾರ್ಕ್ ಉದ್ಘಾಟನೆ</strong></p><p>‘ಲೋಕೋಪಯೋಗಿ ಇಲಾಖೆ ₹4.5 ಕೋಟಿ ವೆಚ್ಚದಲ್ಲಿ ಸೌಧದ ಆವರಣದಲ್ಲಿ ನಿರ್ಮಿಸಿದ ಪಾರ್ಕ್ ಅನ್ನು ಇದೇ ಅಧಿವೇಶನದಲ್ಲಿ ಉದ್ಘಾಟಿಸಲಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ವಿವಿಧ ರೀತಿಯ ಕಾರಂಜಿ ಒಳಗೊಂಡ ಪಾರ್ಕ್ಗೆ ಜನರು ಭೇಟಿ ನೀಡಿ ನಿರಾಳರಾಗಬಹುದು’ ಎಂದು ತಿಳಿಸಿದರು.</p><p><strong>ಪ್ರತಿಭಟನೆ ತಗ್ಗುವ ನಿರೀಕ್ಷೆ</strong></p><p>‘ಅಧಿವೇಶನ ವೇಳೆ ಪ್ರತಿಭಟನೆ ನಡೆಸುವವರಿಗಾಗಿ ಎರಡು ಕಡೆ ವ್ಯವಸ್ಥೆ ಮಾಡಿದ್ದೇವೆ. ಮೆಕ್ಕೆಜೋಳ, ಕಬ್ಬು ಬೆಳೆಯುವವರ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ವಿವಿಧ ಸಂಘ–ಸಂಸ್ಥೆಗಳ ಜತೆಗೆ ನಗರ ಪೊಲೀಸ್ ಆಯುಕ್ತರು ಸಭೆ ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ಪ್ರತಿಭಟನೆಗಳ ಸಂಖ್ಯೆ ತಗ್ಗುವ ನಿರೀಕ್ಷೆ ಇದೆ’ ಎಂದರು.</p><p>‘ಪ್ರತಿಭಟನೆಗೆ ನಮ್ಮ ಆಕ್ಷೇಪವಿಲ್ಲ. ಆದರೆ, ಯಾರೂ ಪ್ರತಿಭಟನೆ ನಡೆಸುವ ಮುನ್ನ, ಜಿಲ್ಲಾಧಿಕಾರಿ ಕಚೇರಿ ಮತ್ತು ನಗರ ಪೊಲೀಸ್ ಕಮಿಷನರ್ ಕಚೇರಿಗೆ ತಿಳಿಸಬೇಕು’ ಎಂದು ಹೇಳಿದರು.</p><p>ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮತ್ತಿತರರು ಹಾಜರಿದ್ದರು.</p><p><strong>‘ಮಹಾಮೇಳಾವ್ಗೆ ಅನುಮತಿ ಕೊಡುವುದಿಲ್ಲ’</strong></p><p>‘ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿಗೆ(ಎಂಇಎಸ್) ಯಾವ ಕಾರಣಕ್ಕೂ ಅನುಮತಿ ಕೊಡುವುದಿಲ್ಲ. ಒಂದುವೇಳೆ ಮಹಾಮೇಳಾವ್ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>