ಮೂಲಸೌಕರ್ಯ ವೃದ್ಧಿಗೆ ಕ್ರಮ:
'ಗುಡ್ಡಕ್ಕೆ ಬರುವ ಆದಾಯ ಸದ್ಬಳಕೆ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ. 246 ಕೊಠಡಿಗಳ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿ ಹಂತಕ್ಕೆ ತಲುಪಿದ್ದು, ಅಲ್ಲಿ ಭಕ್ತರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗುವುದು. ಕುಡಿಯುವ ನೀರಿನ ಟ್ಯಾಂಕುಗಳ ನಿರ್ಮಾಣ ಮೂಲಕ ಜಲದಾಹ ನೀಗಿಸಲಾಗುವುದು. ಜಿಲ್ಲಾಧಕಾರಿ ಹಾಗೂ ಶಾಸಕರ ಮಾರ್ಗದರ್ಶನದಲ್ಲಿ ರಸ್ತೆ ನಿರ್ಮಾಣ ಮತ್ತಿತರ ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುವುದು' ಎಂದು ಯಲ್ಲಮ್ಮ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ದೊಡಗೌಡರ ತಿಳಿಸಿದರು.