ಅಂಜಲಿ, ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಪತ್ನಿ. ಬಾಲಭವನದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದಾರೆ. 2013ರ ಚುನಾವಣೆಯಲ್ಲಿ ಖಾನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ದೊರೆಯದಿದ್ದಾಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಮೇಲೆ ಸ್ಪರ್ಧಿಸಿ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪ್ರಾಬಲ್ಯದ ನಡುವೆಯೂ ಗೆದ್ದಿದ್ದಾರೆ. ಮೊದಲ ಗೆಲುವಿನಲ್ಲೇ ಅವರಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ದೊರೆತಿದೆ.