<p><strong>ಬೆಳಗಾವಿ</strong>: ಹಾಲಿನ ದರ ಏರಿಕೆ ಖಂಡಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.</p><p>ಹೆಗಲ ಮೇಲೆ ಹಾಲಿನ ಕ್ಯಾನ್ ಎತ್ತು ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p><p>'ಕಾಂಗ್ರೆಸ್ ಸರ್ಕಾರ ಕಳೆದ 8 ತಿಂಗಳಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡುತ್ತಿಲ್ಲ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರಾಜ್ಯದ ಪಾಲು ನೀಡುತ್ತಿಲ್ಲ. ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸದೆ, </p><p>ರೈತ ವಿರೋಧಿಯಾಗಿ ಕೆಲಸ ಮಾಡುತ್ತಿದೆ' ಎಂದು ಆರೋಪಿಸಿದರು.</p><p>ಪಕ್ಷದ ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, 'ಲೋಕಸಭೆ ಚುನಾವಣೆಯಲ್ಲಿ ಜನರಿಗೆ ನೆರವಾಗುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಈಗ ಅಗತ್ಯ ವಸ್ತುಗಳ ದರ ಹೆಚ್ಚಿಸಿ ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಈ ಸರ್ಕಾರ ಅಗತ್ಯ ವಸ್ತುಗಳ ದರ ಇಳಿಸಬೇಕು. ಇಲ್ಲವೇ ಅಧಿಕಾರ ಬಿಟ್ಟು ತೊಲಗಬೇಕು' ಎಂದು ಆಗ್ರಹಿಸಿದರು.</p><p>ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p><p>ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಮಲ್ಲಿಕಾರ್ಜುನ ಮಾದಮ್ಮನವರ, ಸಂತೋಷ ಹಡಪದ, ಲೀನಾ ಟೋಪಣ್ಣವರ, ಎಫ್.ಎಸ್.ಸಿದ್ದನಗೌಡರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಹಾಲಿನ ದರ ಏರಿಕೆ ಖಂಡಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.</p><p>ಹೆಗಲ ಮೇಲೆ ಹಾಲಿನ ಕ್ಯಾನ್ ಎತ್ತು ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p><p>'ಕಾಂಗ್ರೆಸ್ ಸರ್ಕಾರ ಕಳೆದ 8 ತಿಂಗಳಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡುತ್ತಿಲ್ಲ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರಾಜ್ಯದ ಪಾಲು ನೀಡುತ್ತಿಲ್ಲ. ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸದೆ, </p><p>ರೈತ ವಿರೋಧಿಯಾಗಿ ಕೆಲಸ ಮಾಡುತ್ತಿದೆ' ಎಂದು ಆರೋಪಿಸಿದರು.</p><p>ಪಕ್ಷದ ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, 'ಲೋಕಸಭೆ ಚುನಾವಣೆಯಲ್ಲಿ ಜನರಿಗೆ ನೆರವಾಗುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಈಗ ಅಗತ್ಯ ವಸ್ತುಗಳ ದರ ಹೆಚ್ಚಿಸಿ ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಈ ಸರ್ಕಾರ ಅಗತ್ಯ ವಸ್ತುಗಳ ದರ ಇಳಿಸಬೇಕು. ಇಲ್ಲವೇ ಅಧಿಕಾರ ಬಿಟ್ಟು ತೊಲಗಬೇಕು' ಎಂದು ಆಗ್ರಹಿಸಿದರು.</p><p>ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p><p>ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಮಲ್ಲಿಕಾರ್ಜುನ ಮಾದಮ್ಮನವರ, ಸಂತೋಷ ಹಡಪದ, ಲೀನಾ ಟೋಪಣ್ಣವರ, ಎಫ್.ಎಸ್.ಸಿದ್ದನಗೌಡರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>