<p><strong>ಬೆಳಗಾವಿ</strong>: ಈ ಬಾರಿ ಹೋಳಿ ಹುಣ್ಣಿಮೆ ದಿನವೇ(ಮಾ.3) ಚಂದ್ರಗ್ರಹಣವೂ ಇರುವುದರಿಂದ ನಗರದ ವಿವಿಧ ದೇವಸ್ಥಾನಗಳಲ್ಲಿ ಆಚರಣೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.</p><p>ಪ್ರತಿವರ್ಷ ಹೋಳಿ ಹುಣ್ಣಿಮೆಯಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪಾಂಗುಳ ಗಲ್ಲಿಯ ಅಶ್ವತ್ಥಾಮ ಮಂದಿರದ ಎದುರು ನೂರಾರು ಜನರು ಉರುಳುಸೇವೆ ಮಾಡಿ ಸಂಭ್ರಮಿಸುತ್ತಿದ್ದರು. ಈ ಸಲ ಬೆಳಿಗ್ಗೆ 8.30ರಿಂದ 10 ಗಂಟೆಯವರೆಗೆ ಉರುಳುಸೇವೆಗೆ ಅವಕಾಶ ಕಲ್ಪಿಸಲಾಗಿದೆ.</p><p>ಚವಾಟ್ ಗಲ್ಲಿಯ ದೇವಸ್ಥಾನದ ಮುಂದೆ ಬೆಳಿಗ್ಗೆ 9ಕ್ಕೆ ಕಾಮಣ್ಣ ದಹಿಸಿ, ಪೂಜೆ ಸಲ್ಲಿಸಲಾಗುತ್ತದೆ. ನಂತರ ಸಂಜೆ 7 ಗಂಟೆಯವರೆಗೆ ದೇವಸ್ಥಾನ ಬಂದ್ ಮಾಡಲು ನಿರ್ಧರಿಸಲಾಗಿದೆ.</p><p>‘ಭದ್ರತೆಗಾಗಿ 1 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿದ್ದೇವೆ. 250 ಗೃಹರಕ್ಷಕ ದಳ ಸಿಬ್ಬಂದಿ ಬಳಸಿಕೊಳ್ಳುತ್ತಿದ್ದೇವೆ. 7 ಕೆಎಸ್ಆರ್ಪಿ, 10 ಸಿಎಆರ್ ತುಕಡಿಗಳು ಇರಲಿವೆ. ಮದ್ಯ ಸೇವಿಸಿ, ಮಾರಕಾಸ್ತ್ರ ಇರಿಸಿಕೊಂಡು ಓಡಾಡುವರನ್ನು ಪತ್ತೆಹಚ್ಚಲು 19 ಚೆಲ್ಪೋಸ್ಟ್ ತೆರೆದಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಈ ಬಾರಿ ಹೋಳಿ ಹುಣ್ಣಿಮೆ ದಿನವೇ(ಮಾ.3) ಚಂದ್ರಗ್ರಹಣವೂ ಇರುವುದರಿಂದ ನಗರದ ವಿವಿಧ ದೇವಸ್ಥಾನಗಳಲ್ಲಿ ಆಚರಣೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.</p><p>ಪ್ರತಿವರ್ಷ ಹೋಳಿ ಹುಣ್ಣಿಮೆಯಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪಾಂಗುಳ ಗಲ್ಲಿಯ ಅಶ್ವತ್ಥಾಮ ಮಂದಿರದ ಎದುರು ನೂರಾರು ಜನರು ಉರುಳುಸೇವೆ ಮಾಡಿ ಸಂಭ್ರಮಿಸುತ್ತಿದ್ದರು. ಈ ಸಲ ಬೆಳಿಗ್ಗೆ 8.30ರಿಂದ 10 ಗಂಟೆಯವರೆಗೆ ಉರುಳುಸೇವೆಗೆ ಅವಕಾಶ ಕಲ್ಪಿಸಲಾಗಿದೆ.</p><p>ಚವಾಟ್ ಗಲ್ಲಿಯ ದೇವಸ್ಥಾನದ ಮುಂದೆ ಬೆಳಿಗ್ಗೆ 9ಕ್ಕೆ ಕಾಮಣ್ಣ ದಹಿಸಿ, ಪೂಜೆ ಸಲ್ಲಿಸಲಾಗುತ್ತದೆ. ನಂತರ ಸಂಜೆ 7 ಗಂಟೆಯವರೆಗೆ ದೇವಸ್ಥಾನ ಬಂದ್ ಮಾಡಲು ನಿರ್ಧರಿಸಲಾಗಿದೆ.</p><p>‘ಭದ್ರತೆಗಾಗಿ 1 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿದ್ದೇವೆ. 250 ಗೃಹರಕ್ಷಕ ದಳ ಸಿಬ್ಬಂದಿ ಬಳಸಿಕೊಳ್ಳುತ್ತಿದ್ದೇವೆ. 7 ಕೆಎಸ್ಆರ್ಪಿ, 10 ಸಿಎಆರ್ ತುಕಡಿಗಳು ಇರಲಿವೆ. ಮದ್ಯ ಸೇವಿಸಿ, ಮಾರಕಾಸ್ತ್ರ ಇರಿಸಿಕೊಂಡು ಓಡಾಡುವರನ್ನು ಪತ್ತೆಹಚ್ಚಲು 19 ಚೆಲ್ಪೋಸ್ಟ್ ತೆರೆದಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>