ರಾಮದುರ್ಗ (ಬೆಳಗಾವಿ ಜಿಲ್ಲೆ): ಹೊರವಲಯದ ಮುಳ್ಳೂರು ಗುಡ್ಡದಲ್ಲಿ ಸ್ಥಾಪಿಸಿರುವ ದೇಶದಲ್ಲೆ ಅತಿ ಎತ್ತರದ್ದು ಎನ್ನಲಾದ ‘ನಂದಿ’ ವಿಗ್ರಹದ ಲೋಕಾರ್ಪಣೆ ಕಾರ್ಯಕ್ರಮ ಮಹಾಶಿವರಾತ್ರಿ ದಿನವಾದ ಗುರುವಾರ ವಿಜೃಂಭಣೆಯಿಂದ ನೆರವೇರಿತು. ಅದನ್ನು ನೋಡಲು ಭಕ್ತರು ದಂಡು ದಂಡಾಗಿ ಬರುತ್ತಿದ್ದಾರೆ.
ಇಲ್ಲಿ ಸ್ಥಾಪಿಸಿರುವ ರಾಜ್ಯದ 2ನೇ ಅತಿ ಎತ್ತರದ್ದು ಎನ್ನಲಾದ 78 ಅಡಿ ಎತ್ತರದ ಶಿವನ (ರಾಮೇಶ್ವರ) ಮೂರ್ತಿ ಮುಂಭಾಗದಲ್ಲಿ ನಂದಿ (ಬಸವಣ್ಣ) ಮೂರ್ತಿಯನ್ನು ಸ್ಥಾಪಿಸಿ ಗುಡ್ಡವನ್ನು ಮತ್ತಷ್ಟು ಆಕರ್ಷಕಗೊಳಿಸಲಾಗಿದೆ.
ರಾಮದುರ್ಗ (ಬೆಳಗಾವಿ ಜಿಲ್ಲೆ) ಹೊರವಲಯದ ಮುಳ್ಳೂರು ಗುಡ್ಡದಲ್ಲಿ ಸ್ಥಾಪಿಸಿರುವ ದೇಶದಲ್ಲೆ ಅತಿ ಎತ್ತರದ್ದು ಎನ್ನಲಾದ ‘ನಂದಿ’ ವಿಗ್ರಹದ ಲೋಕಾರ್ಪಣೆ ಕಾರ್ಯಕ್ರಮ ಮಹಾಶಿವರಾತ್ರಿ ದಿನವಾದ ಗುರುವಾರ ವಿಜೃಂಭಣೆಯಿಂದ ನೆರವೇರಿತು.#belagavi#ShivaRatripic.twitter.com/TDe7fu7C6b
‘22 ಅಡಿ ಎತ್ತರ, 32 ಅಡಿ ಉದ್ದ ಹಾಗೂ 14 ಅಡಿ ಅಗಲವಿರುವ ಈ ಮೂರ್ತಿ ಸಿದ್ಧಪಡಿಸಲು ಶಿಲ್ಪಿಗಳು ಎರಡು ವರ್ಷಗಳು ಕೆಲಸ ಮಾಡಿದ್ದಾರೆ. ಇದು ದೇಶದಲ್ಲೇ ಅತಿ ಎತ್ತರದ ಮೂರ್ತಿಯಾಗಿದೆ’ ಎಂದು ಸ್ಥಾಪಿಸಿರುವ ಮಾಜಿ ಶಾಸಕ ಅಶೋಕ ಪಟ್ಟಣ ತಿಳಿಸಿದರು.