ಅನಾಹುತದಿಂದಾಗಿ ಶೆಡ್ನಲ್ಲಿದ್ದ ಚಿನ್ನ, ಬೆಳ್ಳಿ, ₹2.50 ಲಕ್ಷ ಹಣ, ಮನೆಯಲ್ಲಿನ ದಿನಬಳಕೆಯ ವಸ್ತುಗಳು ಸುಟ್ಟು ನಾಶವಾಗಿವೆ. ಯಲ್ಲಪ್ಪ ಭೀಮಪ್ಪ ರಾಮಣ್ಣವರ ಹೊಸ ಮನೆ ನಿರ್ಮಾಣ ಮಾಡುತ್ತಿದ್ದು, ಹೀಗಾಗಿ ಇಡೀ ಕುಟುಂಬ ಗುಡಿಸಿಲಿಗೆ ಸ್ಥಳಾಂತರಗೊಂಡಿತ್ತು. ಹಣ, ಒಡವೆ ಎಲ್ಲವೂ ಮನೆಯಲ್ಲಿದ್ದವು. ಆದರೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕುಟುಂಬ ಎಲ್ಲವನ್ನೂ ಕಳೆದುಕೊಂಡಿದೆ. ಕುಟುಂಬದ ರೋದನ ಮುಗಿಲುಮುಟ್ಟಿತ್ತು.