<p><strong>ಬೆಳಗಾವಿ:</strong> ತಡವಾಗಿ ವಿಸರ್ಜನೆಗೆ ತೆರಳುತ್ತಿರುವ ಇಲ್ಲಿನ ಚವಾಟ್ ಗಲ್ಲಿಯ ಸಾರ್ವಜನಿಕ ಗಣೇಶ ಮೂರ್ತಿಯನ್ನು ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸರು ಮಂಗಳವಾರ ಬೆಳಿಗ್ಗೆ ತಡೆದಿದ್ದಾರೆ.</p><p>ಸಾಂಪ್ರದಾಯಿಕ ಮಾರ್ಗ ಬಿಟ್ಟು, ಬೇರೆ ಮಾರ್ಗದಲ್ಲಿ ಹೋಗಿ ವಿಸರ್ಜಿಸುವಂತೆ ಹೇಳುತ್ತಿದ್ದಾರೆ.</p><p>ಇದರಿಂದ ಆಕ್ರೋಶಗೊಂಡ ಚವಾಟ್ ಗಲ್ಲಿಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಪ್ರತಿಭಟನೆ ಆರಂಭಿಸಿದ್ದಾರೆ.</p><p>'ಬೇರೆ ಮಾರ್ಗದಲ್ಲಿ ಹೋಗಿ ಮೂರ್ತಿ ವಿಸರ್ಜನೆ ಮಾಡುವುದಿಲ್ಲ.</p><p>ಪ್ರತಿವರ್ಷ ಹೋಗುವ ಮಾರ್ಗದಲ್ಲಿ ಅವಕಾಶ ಕೊಡಬೇಕು' ಎಂದು ಪಟ್ಟು ಹಿಡಿದಿದ್ದಾರೆ.</p><p>ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. </p><p><strong>ಮೆರವಣಿಗೆ ಆರಂಭ:</strong> </p><p>ಸಾಂಪ್ರದಾಯಿಕ ಮಾರ್ಗದಲ್ಲೇ ಪೊಲೀಸರು ಅವಕಾಶ ಕೊಟ್ಟಿದ್ದರಿಂದ ಚವಾಟ್ ಗಲ್ಲಿಯ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಕೆಲಹೊತ್ತಿನ ಬಳಿಕ ಆರಂಭವಾಯಿತು.</p><p>ಪೊಲೀಸ್ ಭದ್ರತೆಯಲ್ಲೇ ಕಚೇರಿ ಗಲ್ಲಿ ಮಾರ್ಗವಾಗಿ, ಕಪಿಲೇಶ್ವರ ದೇವಸ್ಥಾನದ ಹೊಂಡದತ್ತ ಮೆರವಣಿಗೆ ಸಾಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಡವಾಗಿ ವಿಸರ್ಜನೆಗೆ ತೆರಳುತ್ತಿರುವ ಇಲ್ಲಿನ ಚವಾಟ್ ಗಲ್ಲಿಯ ಸಾರ್ವಜನಿಕ ಗಣೇಶ ಮೂರ್ತಿಯನ್ನು ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸರು ಮಂಗಳವಾರ ಬೆಳಿಗ್ಗೆ ತಡೆದಿದ್ದಾರೆ.</p><p>ಸಾಂಪ್ರದಾಯಿಕ ಮಾರ್ಗ ಬಿಟ್ಟು, ಬೇರೆ ಮಾರ್ಗದಲ್ಲಿ ಹೋಗಿ ವಿಸರ್ಜಿಸುವಂತೆ ಹೇಳುತ್ತಿದ್ದಾರೆ.</p><p>ಇದರಿಂದ ಆಕ್ರೋಶಗೊಂಡ ಚವಾಟ್ ಗಲ್ಲಿಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಪ್ರತಿಭಟನೆ ಆರಂಭಿಸಿದ್ದಾರೆ.</p><p>'ಬೇರೆ ಮಾರ್ಗದಲ್ಲಿ ಹೋಗಿ ಮೂರ್ತಿ ವಿಸರ್ಜನೆ ಮಾಡುವುದಿಲ್ಲ.</p><p>ಪ್ರತಿವರ್ಷ ಹೋಗುವ ಮಾರ್ಗದಲ್ಲಿ ಅವಕಾಶ ಕೊಡಬೇಕು' ಎಂದು ಪಟ್ಟು ಹಿಡಿದಿದ್ದಾರೆ.</p><p>ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. </p><p><strong>ಮೆರವಣಿಗೆ ಆರಂಭ:</strong> </p><p>ಸಾಂಪ್ರದಾಯಿಕ ಮಾರ್ಗದಲ್ಲೇ ಪೊಲೀಸರು ಅವಕಾಶ ಕೊಟ್ಟಿದ್ದರಿಂದ ಚವಾಟ್ ಗಲ್ಲಿಯ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಕೆಲಹೊತ್ತಿನ ಬಳಿಕ ಆರಂಭವಾಯಿತು.</p><p>ಪೊಲೀಸ್ ಭದ್ರತೆಯಲ್ಲೇ ಕಚೇರಿ ಗಲ್ಲಿ ಮಾರ್ಗವಾಗಿ, ಕಪಿಲೇಶ್ವರ ದೇವಸ್ಥಾನದ ಹೊಂಡದತ್ತ ಮೆರವಣಿಗೆ ಸಾಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>