<p><strong>ಬೆಳಗಾವಿ</strong>: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) 25ನೇ ವಾರ್ಷಿಕ ಘಟಿಕೋತ್ಸವ (ಭಾಗ–1) ಜುಲೈ 4ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ. ಮೂವರಿಗೆ ಗೌರವ ಡಾಕ್ಟರೇಟ್ ಮತ್ತು 60,052 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. </p>.<p>‘ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಡಾ.ವಿ.ನಾರಾಯಣನ್, ಎಕ್ಸೆಲ್ ಇಂಡಿಯಾ ಸಂಸ್ಥಾಪಕ ಪ್ರಶಾಂತ್ ಪ್ರಕಾಶ್ ಮತ್ತು ಬೆಂಗಳೂರಿನ ಏಟ್ರಿಯ ವಿಶ್ವವಿದ್ಯಾಲಯದ ಕುಲಾಧಿಪತಿ ಸಿ.ಎಸ್.ಸುಂದರ್ ರಾಜು ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಪ್ರದಾನ ಮಾಡಲಾಗುವುದು’ ಎಂದು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ ಹೇಳಿದರು.</p>.<p>‘ಕೇಂದ್ರದ ಪ್ರಧಾನ ವೈದ್ಯಕೀಯ ಸಲಹೆಗಾರ ಪ್ರೊ.ಅಜಯ್ಕುಮಾರ್ ಸೂದ್, ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಾಲ್ಗೊಳ್ಳುವರು’ ಎಂದು ವಿವರಿಸಿದರು.</p>.<p>‘2025–26ನೇ ಸಾಲಿನಿಂದ ಸ್ನಾತಕ ಕೋರ್ಸ್ಗಳ ಪಠ್ಯಕ್ರಮ ಬದಲಿಸಿದ್ದೇವೆ. ಪ್ರಸ್ತುತ ಕೈಗಾರಿಕೆಗಳು ಬಯಸುವ, ಕೌಶಲ ಆಧಾರಿತ ಪಠ್ಯಕ್ರಮ ದೇಶದಲ್ಲೇ ಮಾದರಿಯಾಗಿದೆ. ವಿವಿಧ ಕ್ಷೇತ್ರದವರ ಜೊತೆ ಚರ್ಚಿಸಿ ಇದನ್ನು ರೂಪಿಸಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) 25ನೇ ವಾರ್ಷಿಕ ಘಟಿಕೋತ್ಸವ (ಭಾಗ–1) ಜುಲೈ 4ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ. ಮೂವರಿಗೆ ಗೌರವ ಡಾಕ್ಟರೇಟ್ ಮತ್ತು 60,052 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. </p>.<p>‘ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಡಾ.ವಿ.ನಾರಾಯಣನ್, ಎಕ್ಸೆಲ್ ಇಂಡಿಯಾ ಸಂಸ್ಥಾಪಕ ಪ್ರಶಾಂತ್ ಪ್ರಕಾಶ್ ಮತ್ತು ಬೆಂಗಳೂರಿನ ಏಟ್ರಿಯ ವಿಶ್ವವಿದ್ಯಾಲಯದ ಕುಲಾಧಿಪತಿ ಸಿ.ಎಸ್.ಸುಂದರ್ ರಾಜು ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಪ್ರದಾನ ಮಾಡಲಾಗುವುದು’ ಎಂದು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ ಹೇಳಿದರು.</p>.<p>‘ಕೇಂದ್ರದ ಪ್ರಧಾನ ವೈದ್ಯಕೀಯ ಸಲಹೆಗಾರ ಪ್ರೊ.ಅಜಯ್ಕುಮಾರ್ ಸೂದ್, ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಾಲ್ಗೊಳ್ಳುವರು’ ಎಂದು ವಿವರಿಸಿದರು.</p>.<p>‘2025–26ನೇ ಸಾಲಿನಿಂದ ಸ್ನಾತಕ ಕೋರ್ಸ್ಗಳ ಪಠ್ಯಕ್ರಮ ಬದಲಿಸಿದ್ದೇವೆ. ಪ್ರಸ್ತುತ ಕೈಗಾರಿಕೆಗಳು ಬಯಸುವ, ಕೌಶಲ ಆಧಾರಿತ ಪಠ್ಯಕ್ರಮ ದೇಶದಲ್ಲೇ ಮಾದರಿಯಾಗಿದೆ. ವಿವಿಧ ಕ್ಷೇತ್ರದವರ ಜೊತೆ ಚರ್ಚಿಸಿ ಇದನ್ನು ರೂಪಿಸಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>