ಮಳೆಗಾಲ ಆರಂಭಗೊಂಡರೆ ಬೆಳಗಾವಿ ಪಣಜಿ ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ನಿರ್ಮಿಸಿರುವ ತಾತ್ಕಾಲಿಕ ಮಾರ್ಗಗಳು ಹಾಳಾಗಿ ವಾಹನಗಳು ಸಾಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ಗುಂಜಿ– ಲೋಂಡಾ– ರಾಮನಗರ ಭಾಗದ ನಾಗರಿಕರು ಸಮಸ್ಯೆ ಎದುರಿಸುವಂತಾಗಿದೆ. 5 ವರ್ಷಗಳಿಂದ ಇದನ್ನೇ ಅನುಭವಿಸುತ್ತಿದ್ದೇವೆ. ಹದಗೆಟ್ಟ ರಸ್ತೆಯಲ್ಲಿ ಸಾಗುವುದರಿಂದ ಮುಕ್ತಿ ಎಂದು ಸಿಗುವುದೋ ಎಂದು ಕಾಯುವಂತಾಗಿದೆ.-ಬಾಬುರಾವ್ ದೇಸಾಯಿ ಲೋಂಡಾ ಗ್ರಾಮಸ್ಥ
ಬೆಳಗಾವಿ ಪಣಜಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಧಾರವಾಡದ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ. ಈ ಸಮಸ್ಯೆಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಗಮನಕ್ಕೂ ತರಲಾಗಿದೆ.–ವಿಠ್ಠಲ ಹಲಗೇಕರ ಶಾಸಕ ಖಾನಾಪುರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.