ಮನೆಗಳ ಮಂಜೂರಾತಿಯಲ್ಲಿ ಅಕ್ರಮವಾಗಿರುವ ಕುರಿತು ದೂರುಗಳಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಒತ್ತಾಯಿಸಿದ್ದರು. ಜಿಲ್ಲಾ ಪಂಚಾಯಿತಿ ಸಿಇಒ ಗಮನಕ್ಕೆ ತಂದಿದ್ದರು. ಆರ್ಟಿಐ ಕಾರ್ಯಕರ್ತ ಸುರೇಂದ್ರ ಉಗಾರೆ ಕೂಡ ದಾಖಲೆಗಳನ್ನು ಸಲ್ಲಿಸಿ, ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಒತ್ತಾಯಿಸಿದ್ದರು.