ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ದೇಶದಲ್ಲಿ ಇದು ಆರಂಭವಾಗಿದೆ. ನಮ್ಮದು ಶಾಂತಿಪ್ರಿಯ ದೇಶ. ಇಲ್ಲಿ ವಿವಿಧ ಭಾಷೆಗಳು, ಜನಾಂಗಗಳು, ಧರ್ಮಗಳ ಜನರಿದ್ದರೂ ನಾವು ಒಂದೇ ಎಂದು ಸಾರುವ ದೇಶವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಜಾತಿ, ಧರ್ಮಗಳ ಸಂಘರ್ಷ, ಒಡೆದಾಳುವ ನೀತಿ ಇತ್ಯಾದಿಗಳನ್ನು ಕಿತ್ತೆಸೆದು ನಾವು ಭಾರತೀಯರೆಲ್ಲ ಒಂದೇ ಎನ್ನುವ ಭಾವ ಹುಟ್ಟಿಸುವುದು ಯಾತ್ರೆಯ ಮುಖ್ಯ ಉದ್ದೇಶ ಎಂದು ಮಾಧ್ಯಮಗಳಿಗೆ ಹೇಳಿದರು.