‘ನವೆಂಬರ್ 21ರಂದು ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಕಾರ್ಯಕ್ರಮದ ಉದ್ಘಾಟನೆ ಹಾಗೂ ಡಿಸೆಂಬರ್ 23ರಂದು ಮಹಾಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಜಿಲ್ಲಾ ಸಮಿತಿ, ತಾಲೂಕು ಸಮಿತಿಗಳು, ಪ್ರಶಿಕ್ಷಣ ಸಮಿತಿ, ಪ್ರವಚನ ಸಮಿತಿ, ಸಂಪರ್ಕ ಸಮಿತಿ ರಚಿಸ ಲಾಗುತ್ತಿದೆ. ಒಂದು ತಿಂಗಳ ಕಾಲ ಶಾಲೆ- ಕಾಲೇಜುಗಳಲ್ಲಿ, ದೇವಸ್ಥಾನಗಳಲ್ಲಿ ಹಾಗೂ ಇನ್ನಿತರ ಸ್ಥಳಗಳಲ್ಲಿ ಭಗವದ್ಗೀತೆಯ 10ನೇ ಅಧ್ಯಾಯದ ಪಠಣ ನಡೆಯಲಿದೆ’ ಎಂದು ಶ್ರೀಗಳು ತಿಳಿಸಿದರು.