<p><strong>ಹುಕ್ಕೇರಿ:</strong> ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ ನಿರ್ದೆಶಕರ ಸ್ಥಾನಕ್ಕೆ ಹುಕ್ಕೇರಿ ಕ್ಷೇತ್ರದ ಚುನಾವಣೆಗೆ ಉಚ್ಚ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಂಡ ಹಿನ್ನಲೆಯಲ್ಲಿ ಸ್ಥಳೀಯ ವಕೀಲರ ಸಂಘದ ಅಧ್ಯಕ್ಷ ಕೆ.ಬಿ.ಕುರಬೇಟ ನೇತೃತ್ವದಲ್ಲಿ ಸಂಭ್ರಮಾಚರಣೆ ಶನಿವಾರ ನಡೆಯಿತು.</p>.<p>‘ಅ.19 ರಂದು (ಭಾನುವಾರ) ಹುಕ್ಕೇರಿ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಜರುಗಲಿದ್ದು, ಬೆಳಿಗ್ಗೆ 9 ರಿಂದ ಮಧ್ಯಾಹ್ನ 4 ರವರೆಗೆ ಮತದಾನ ಜರುಗಲಿದೆ’ ಎಂದು ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿ ರಮೇಶ್ ಕತ್ತಿ ತಿಳಿಸಿದರು.</p>.<p>ಪ್ರಜಾವಾಣಿಯೊಂದಿಗೆ ಮಾತನಾಡಿದ ಅವರು, ‘ಅಧರ್ಮಿಯರ ವಿರುದ್ಧ ಧರ್ಮ ಗೆದ್ದಿದೆ. ನಮ್ಮ ನ್ಯಾಯಕ್ಕೆ ಜಯ ಸಿಕ್ಕಿದಂತಾಗಿದೆ. ಹಿರಿಯರ ಮತ್ತು ಕಾನೂನು ತಜ್ಞರ ಸಲಹೆಯಂತೆ ಕಾನೂನು ಹೋರಾಟ ಮಾಡಿದ್ದೇವೆ’ ಎಂದರು.</p>.<p><strong>ವಿನಂತಿ:</strong> ಕ್ಷೇತ್ರದ 92 ಡೆಲಿಗೇಟ್ಸ್ ( ಡಿಸಿಸಿ ಬ್ಯಾಂಕ್ ನಿರ್ದೇಶಕರ ಆಯ್ಕೆಗೆ ಮತ ಚಲಾಯಿಸುವವರು) ಭಾನುವಾರ ಬೆಳಗಾವಿಯ ಕ್ಯಾಂಪ್ ಪ್ರದೇಶದ ಬಿ.ಕೆ.ಮಾಡಲ್ ಹೈಸ್ಕೂಲಿನಲ್ಲಿ ಮತದಾನ ಮಾಡುವಂತೆ ವಿನಂತಿಸಿದರು.</p>.<p><strong>ಗೆಲುವು ನಮ್ಮದೆ</strong>: ‘ಭಾನುವಾರ ಜರುಗುವ 7 ಕ್ಷೇತ್ರದ ಚುನಾವಣೆಯಲ್ಲಿ ಎಲ್ಲ ಏಳು ಅಭ್ಯರ್ಥಿಗಳು (ಜಾರಕಿಹೊಳಿ ವಿರೋಧ ಬಣದ) ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ, ನಿರ್ದೇಶಕ ಸತ್ಯಪ್ಪ ನಾಯಿಕ, ಮುಖಂಡರಾದ ಸಂಜಯ ನಿಲಜಗಿ, ಪ್ರಜ್ವಲ್ ನಿಲಜಗಿ, ಗುರುರಾಜ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ ನಿರ್ದೆಶಕರ ಸ್ಥಾನಕ್ಕೆ ಹುಕ್ಕೇರಿ ಕ್ಷೇತ್ರದ ಚುನಾವಣೆಗೆ ಉಚ್ಚ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಂಡ ಹಿನ್ನಲೆಯಲ್ಲಿ ಸ್ಥಳೀಯ ವಕೀಲರ ಸಂಘದ ಅಧ್ಯಕ್ಷ ಕೆ.ಬಿ.ಕುರಬೇಟ ನೇತೃತ್ವದಲ್ಲಿ ಸಂಭ್ರಮಾಚರಣೆ ಶನಿವಾರ ನಡೆಯಿತು.</p>.<p>‘ಅ.19 ರಂದು (ಭಾನುವಾರ) ಹುಕ್ಕೇರಿ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಜರುಗಲಿದ್ದು, ಬೆಳಿಗ್ಗೆ 9 ರಿಂದ ಮಧ್ಯಾಹ್ನ 4 ರವರೆಗೆ ಮತದಾನ ಜರುಗಲಿದೆ’ ಎಂದು ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿ ರಮೇಶ್ ಕತ್ತಿ ತಿಳಿಸಿದರು.</p>.<p>ಪ್ರಜಾವಾಣಿಯೊಂದಿಗೆ ಮಾತನಾಡಿದ ಅವರು, ‘ಅಧರ್ಮಿಯರ ವಿರುದ್ಧ ಧರ್ಮ ಗೆದ್ದಿದೆ. ನಮ್ಮ ನ್ಯಾಯಕ್ಕೆ ಜಯ ಸಿಕ್ಕಿದಂತಾಗಿದೆ. ಹಿರಿಯರ ಮತ್ತು ಕಾನೂನು ತಜ್ಞರ ಸಲಹೆಯಂತೆ ಕಾನೂನು ಹೋರಾಟ ಮಾಡಿದ್ದೇವೆ’ ಎಂದರು.</p>.<p><strong>ವಿನಂತಿ:</strong> ಕ್ಷೇತ್ರದ 92 ಡೆಲಿಗೇಟ್ಸ್ ( ಡಿಸಿಸಿ ಬ್ಯಾಂಕ್ ನಿರ್ದೇಶಕರ ಆಯ್ಕೆಗೆ ಮತ ಚಲಾಯಿಸುವವರು) ಭಾನುವಾರ ಬೆಳಗಾವಿಯ ಕ್ಯಾಂಪ್ ಪ್ರದೇಶದ ಬಿ.ಕೆ.ಮಾಡಲ್ ಹೈಸ್ಕೂಲಿನಲ್ಲಿ ಮತದಾನ ಮಾಡುವಂತೆ ವಿನಂತಿಸಿದರು.</p>.<p><strong>ಗೆಲುವು ನಮ್ಮದೆ</strong>: ‘ಭಾನುವಾರ ಜರುಗುವ 7 ಕ್ಷೇತ್ರದ ಚುನಾವಣೆಯಲ್ಲಿ ಎಲ್ಲ ಏಳು ಅಭ್ಯರ್ಥಿಗಳು (ಜಾರಕಿಹೊಳಿ ವಿರೋಧ ಬಣದ) ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ, ನಿರ್ದೇಶಕ ಸತ್ಯಪ್ಪ ನಾಯಿಕ, ಮುಖಂಡರಾದ ಸಂಜಯ ನಿಲಜಗಿ, ಪ್ರಜ್ವಲ್ ನಿಲಜಗಿ, ಗುರುರಾಜ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>