ಮುಂಜಾನೆ ಎಸ್ಬಿಐಗೆ ಶಾಖೆಗೆ ಹೋಗಿದ್ದ ವಿಜಯಮಹಾಂತೇಶ ಅವರು ಮನೆಗೆ ಮರಳಿ ಬರುವಾಗ ಚೌಕೀಮಠ ಬಳಿ ಮಾತನಾಡುತ್ತಾ ನಿಂತಿದ್ದ ಮೂವರಲ್ಲಿ ಒಬ್ಬರಿಗೆ ಡಿಕ್ಕಿ ಮಾಡಿದ್ದಾರೆ. ಆಗ ವ್ಯಕ್ತಿಯೊಬ್ಬರು ಕೆಳಗೆ ಬಿದ್ದಿದ್ದಾರೆ. ಇದರಿಂದ ಕುಪಿತನಾದ ತಾಲ್ಲೂಕಿನ ಎತ್ತಿನಕೇರಿ ಗ್ರಾಮದ ಅದೃಶ್ಯಪ್ಪ ಬಾಳಪ್ಪ ಶಿವಲಿಂಗನವರ (32) ಸವಾರನನ್ನು ಥಳಿಸಿದ್ದಾರೆ. ಕೆಳಕ್ಕೆ ಬಿದ್ದ ಅವರ ಮೇಲೆ ನಾಲ್ಕೈದು ಬಾರಿ ಒದ್ದಿದ್ದಾರೆ. ಇದರಿಂದ ಪ್ರಾಣ ಹೋಗಿದೆ ಎನ್ನಲಾಗುತ್ತಿದೆ. ಈ ದೃಶ್ಯಗಳು ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಅದನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲಿಸಿದ್ದಾರೆ.