ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಪಾತ್‌ಗೆ ಗುದ್ದಿದ ಬೈಕ್‌: ಹಿಂಬದಿ ಸವಾರ ಸಾವು

Last Updated 5 ಮೇ 2019, 16:20 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಗೋಗಟೆ ವೃತ್ತದ ಬಳಿಯ ರೈಲ್ವೆ ಮೇಲ್ಸೇತುವೆ ಮೇಲಿನ ಫುಟ್‌ಪಾತ್‌ಗೆ ಶನಿವಾರ ರಾತ್ರಿ ಬೈಕ್‌ ಢಿಕ್ಕಿ ಹೊಡೆದುದರಿಂದ ಹಿಂಬದಿ ಸವಾರ ಮಲ್ಲಿಕಾರ್ಜುನ ಅಪ್ಪಣ್ಣ ದರೂರ (25) ಮೃತಪಟ್ಟಿದ್ದಾರೆ. ಬೈಕ್‌ ಸವಾರ ಅಕ್ಷಯ ಸುರೇಶ ಕುಂಬಾರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಥಣಿ ಮೂಲದ ಹಾಗೂ ಬೆಳಗಾವಿಯ ಗೋಂಧಳಿ ಗಲ್ಲಿಯ ನಿವಾಸಿ ಮಲ್ಲಿಕಾರ್ಜುನ ತಮ್ಮ ಸ್ನೇಹಿತ ಅಕ್ಷಯ ಜೊತೆ ಬೈಕ್‌ ಮೇಲೆ ಹೊರಟಿದ್ದಾಗ ಅಪಘಾತ ಸಂಭವಿಸಿತು. ಮಲ್ಲಿಕಾರ್ಜುನ ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬದುಕುಳಿಯಲಿಲ್ಲ.

ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT