<p><strong>ಬೆಳಗಾವಿ:</strong> ‘ಪೌರತ್ವ ಕಾಯ್ದೆ (ತಿದ್ದುಪಡಿ) ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ನಗರದ ಸರ್ದಾರ್ ಮೈದಾನದಲ್ಲಿ ಇದೇ 11ರಂದು ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೇಂದ್ರದ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್, ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ’ ಎಂದು ಶಾಸಕ ಅನಿಲ ಬೆನಕೆ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ದೇಶದ ನಾಗರಿಕರಿಗೆ ಭದ್ರತೆ ಹಾಗೂ ಸೌಲಭ್ಯ ಕಲ್ಪಿಸುವುದು ಹಾಗೂ ಅಕ್ರಮವಾಗಿ ಬಂದಿರುವ ವಲಸಿಗರನ್ನು ಪತ್ತೆ ಹಚ್ಚುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ದೇಶದೆಲ್ಲೆಡೆ ಹಮ್ಮಿಕೊಳ್ಳಲಾಗಿದೆ. ಇದರ ನಗರದಲ್ಲಿಯೂ ಆಯೋಜಿಸಲಾಗಿದೆ’ ಎಂದು ತಿಳಿಸಿದರು.</p>.<p>ಬಿಜೆಪಿ ಮುಖಂಡ ಸಂಜಯ ಪಾಟೀಲ ಮಾತನಾಡಿ, ‘ಕಾಯ್ದೆಯ ಬಗ್ಗೆ ವಿರೋಧ ಪಕ್ಷದವರು ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹಾಗೂ ಕಾಯ್ದೆಯ ನಿಜವಾದ ಸ್ವರೂಪವನ್ನು ಜನರ ಮುಂದೆ ಇಡಲು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p>‘ಲೋಕಸಭಾ ಚುನಾವಣೆಗಿಂತ ಮುಂಚೆ ಬಿಜೆಪಿ ನೀಡಿದ ಭರವಸೆಯಂತೆ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ತ್ರಿವಳಿ ತಲಾಖ್ ನಿಷೇಧ, ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಹಲವು ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದೆ.ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿಯನ್ನು ಸದ್ಯದಲ್ಲಿಯೇ ಕೈಗೆತ್ತಿಕೊಳ್ಳಲಿದೆ’ ಎಂದರು.</p>.<p>ಬೆಳಗಾವಿ ಜಿಲ್ಲಾ (ಗ್ರಾಮೀಣ) ಬಿಜೆಪಿ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಬೆಳಗಾವಿ ನಗರ ಅಧ್ಯಕ್ಷ ರಾಜೇಂದ್ರ ಹರಕುಣಿ, ಬುಡಾ ಅಧ್ಯಕ್ಷ ಫೂಳಪ್ಪ ಹೊಸಮನಿ, ರಾಜು ಚಿಕ್ಕನಗೌಡರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಪೌರತ್ವ ಕಾಯ್ದೆ (ತಿದ್ದುಪಡಿ) ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ನಗರದ ಸರ್ದಾರ್ ಮೈದಾನದಲ್ಲಿ ಇದೇ 11ರಂದು ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೇಂದ್ರದ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್, ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ’ ಎಂದು ಶಾಸಕ ಅನಿಲ ಬೆನಕೆ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ದೇಶದ ನಾಗರಿಕರಿಗೆ ಭದ್ರತೆ ಹಾಗೂ ಸೌಲಭ್ಯ ಕಲ್ಪಿಸುವುದು ಹಾಗೂ ಅಕ್ರಮವಾಗಿ ಬಂದಿರುವ ವಲಸಿಗರನ್ನು ಪತ್ತೆ ಹಚ್ಚುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ದೇಶದೆಲ್ಲೆಡೆ ಹಮ್ಮಿಕೊಳ್ಳಲಾಗಿದೆ. ಇದರ ನಗರದಲ್ಲಿಯೂ ಆಯೋಜಿಸಲಾಗಿದೆ’ ಎಂದು ತಿಳಿಸಿದರು.</p>.<p>ಬಿಜೆಪಿ ಮುಖಂಡ ಸಂಜಯ ಪಾಟೀಲ ಮಾತನಾಡಿ, ‘ಕಾಯ್ದೆಯ ಬಗ್ಗೆ ವಿರೋಧ ಪಕ್ಷದವರು ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹಾಗೂ ಕಾಯ್ದೆಯ ನಿಜವಾದ ಸ್ವರೂಪವನ್ನು ಜನರ ಮುಂದೆ ಇಡಲು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p>‘ಲೋಕಸಭಾ ಚುನಾವಣೆಗಿಂತ ಮುಂಚೆ ಬಿಜೆಪಿ ನೀಡಿದ ಭರವಸೆಯಂತೆ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ತ್ರಿವಳಿ ತಲಾಖ್ ನಿಷೇಧ, ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಹಲವು ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದೆ.ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿಯನ್ನು ಸದ್ಯದಲ್ಲಿಯೇ ಕೈಗೆತ್ತಿಕೊಳ್ಳಲಿದೆ’ ಎಂದರು.</p>.<p>ಬೆಳಗಾವಿ ಜಿಲ್ಲಾ (ಗ್ರಾಮೀಣ) ಬಿಜೆಪಿ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಬೆಳಗಾವಿ ನಗರ ಅಧ್ಯಕ್ಷ ರಾಜೇಂದ್ರ ಹರಕುಣಿ, ಬುಡಾ ಅಧ್ಯಕ್ಷ ಫೂಳಪ್ಪ ಹೊಸಮನಿ, ರಾಜು ಚಿಕ್ಕನಗೌಡರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>