ನಂತರ ಮಾತನಾಡಿದ ಅವರು, ‘ಮೋದಿ ಅಧಿಕಾರಕ್ಕೆ ಬಂದರೆ ದೇಶವನ್ನೇ ಬಿಡುತ್ತೇನೆ ಎಂದು 2014ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದರು. ಈಗ ಅವರ ಪುತ್ರ, ಲೋಕೋಪಯೊಗಿ ಸಚಿವ ರಾಜಕೀಯ ನಿವೃತಿ ಪಡೆಯುತ್ತೇನೆ ಎಂದು ಹೇಳಿದ್ದರೆ. ಇದು ಹಾಸ್ಯಾಸ್ಪದವಾಗಿದೆ. ಜೆಡಿಎಸ್ ಅನ್ನು ಜನರೇ ತಿರಸ್ಕಾರ ಮಾಡಿ, ಕಸದ ತೊಟ್ಟಿಗೆ ಹಾಕಲಿದ್ದಾರೆ. ಆಗ ರೇವಣ್ಣ ರಾಜಕೀಯ ನಿವೃತ್ತಿ ಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ತಿರುಗೇಟು ನೀಡಿದರು.