ಆಯೋಗದ ಭೇಟಿ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಕೊಂಗಡುಪ್ ನೇತೃತ್ವದ ತಂಡ, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ತಂಡದವರು ಜಿಲ್ಲಾಸ್ಪತ್ರೆ ಮತ್ತು ಹೊಸ ವಂಟಮೂರಿಗೆ ಭೇಟಿ ಕೊಟ್ಟು, ಈ ಪ್ರಕರಣದ ಕುರಿತು ಮಾಹಿತಿ ಪಡೆದರು. ಆರ್.ಕೆ.ದುಬೆ, ಅಮೃತಾ ಸೋಲಂಕಿ, ರಾಧಾಕಾಂತ ತ್ರಿಪಾಠಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಸಮಾಜಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಲಕ್ಷ್ಮಣ ಬಬಲಿ, ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಇತರರಿದ್ದರು.