ಇಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಬಡವರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ತಡೆಯುತ್ತಿಲ್ಲ. ಆ ಪಕ್ಷದ ಸಿದ್ಧಾಂತವೇ ಬೇರೆ. ಅಧಿಕಾರ ಹಾಗೂ ಕುರ್ಚಿಯನ್ನು ಹೇಗೆ ಉಳಿಸಿಕೊಳ್ಳಬೇಕು. ಯಾವ ಹಗರಣದಲ್ಲಿ ಎಷ್ಟು ದುಡ್ಡು ಮಾಡಬೇಕು ಎನ್ನುವುದರಲ್ಲೇ ತೊಡಗಿದ್ದಾರೆ’ ಆರೋಪಿಸಿದರು.