<p><strong>ಅಥಣಿ:</strong> ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ಸೋಂಕು ಹತೋಟಿಗೆ ತರುವಲ್ಲಿ ಸಂಪೂರ್ಣ ವಿಫಲವಾಗಿವೆ’ ಎಂದು ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಆರೋಪಿಸಿದರು.</p>.<p>ಇಲ್ಲಿನ ಶಿವಣಗಿ ಸಂಸ್ಕೃತಿ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ನಿಂದ ಗುರುವಾರ ಆಯೋಜಿಸಿದ್ದ ‘ಆರೋಗ್ಯ ಹಸ್ತ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಬಿಜೆಪಿ ಸರ್ಕಾರಗಳು ದರಿದ್ರ ಸರ್ಕಾರಗಳಾಗಿವೆ’ ಎಂದು ದೂರಿದರು.</p>.<p>‘ಕೊರೊನಾದಿಂದ ಕಂಗೆಟ್ಟಿರುವ ಜನರಿಗೆ ಆತ್ಮವಿಶ್ವಾಸ ತುಂಬುವ ಸಲುವಾಗಿ ಪಕ್ಷದಿಂದ ಆರೋಗ್ಯ ಹಸ್ತ ಕಾರ್ಯಕ್ರಮ ರೂಪಿಸಲಾಗಿದೆ. ಕಾರ್ಯಕರ್ತರು ಯೋಧರಂತೆ ಕಾರ್ಯನಿರ್ವಹಿಸಿ ನೆರವಾಗಲಿದ್ದಾರೆ’ ಎಂದರು.</p>.<p>ಪಕ್ಷದ ಮುಖಂಡ ಗಜಾನನ ಮಂಗಸೂಳಿ, ಸಂಚಾಲಕ ಸದಾನಂದ ಡಂಗನವರ ಮಾತನಾಡಿದರು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಮೂವರನ್ನು ಆಯ್ಕೆ ಮಾಡಿ ಅವರಿಗೆ ಕಿಟ್ಗಳನ್ನು ಹಸ್ತಾಂತರಿಸಲಾಯಿತು.</p>.<p>ಮುಖಂಡರಾದ ವೀರಕುಮಾರ ಪಾಟೀಲ, ಕಾಂತಾ ನಾಯಿಕ, ತೇಜಶ್ವಿನಿ ನಾಯಿಕವಾಡಿ, ಅನಿಲ ಸುಣಧೋಳಿ, ಶ್ರೀಕಾಂತ ಪೂಜಾರಿ, ಬಸವರಾಜ ಬುಟಾಳಿ, ಧರೆಪ್ಪ ಠಕ್ಕಣ್ಣವರ, ಸುನೀಲ ಸಂಕ, ರಮೇಶ ಸಿಂದಗಿ, ಯಲ್ಲಪ್ಪಾ ಸಿಂಗೆ, ರಾವಸಾಬ ಐಹೊಳೆ, ನೇಮಿನಾಥ ನಂದೇಶ್ವರ, ಎಸ್.ಕೆ. ಬುಟಾಳಿ, ಶಿವಾನಂದ ಗುಡ್ಡಾಪೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ಸೋಂಕು ಹತೋಟಿಗೆ ತರುವಲ್ಲಿ ಸಂಪೂರ್ಣ ವಿಫಲವಾಗಿವೆ’ ಎಂದು ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಆರೋಪಿಸಿದರು.</p>.<p>ಇಲ್ಲಿನ ಶಿವಣಗಿ ಸಂಸ್ಕೃತಿ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ನಿಂದ ಗುರುವಾರ ಆಯೋಜಿಸಿದ್ದ ‘ಆರೋಗ್ಯ ಹಸ್ತ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಬಿಜೆಪಿ ಸರ್ಕಾರಗಳು ದರಿದ್ರ ಸರ್ಕಾರಗಳಾಗಿವೆ’ ಎಂದು ದೂರಿದರು.</p>.<p>‘ಕೊರೊನಾದಿಂದ ಕಂಗೆಟ್ಟಿರುವ ಜನರಿಗೆ ಆತ್ಮವಿಶ್ವಾಸ ತುಂಬುವ ಸಲುವಾಗಿ ಪಕ್ಷದಿಂದ ಆರೋಗ್ಯ ಹಸ್ತ ಕಾರ್ಯಕ್ರಮ ರೂಪಿಸಲಾಗಿದೆ. ಕಾರ್ಯಕರ್ತರು ಯೋಧರಂತೆ ಕಾರ್ಯನಿರ್ವಹಿಸಿ ನೆರವಾಗಲಿದ್ದಾರೆ’ ಎಂದರು.</p>.<p>ಪಕ್ಷದ ಮುಖಂಡ ಗಜಾನನ ಮಂಗಸೂಳಿ, ಸಂಚಾಲಕ ಸದಾನಂದ ಡಂಗನವರ ಮಾತನಾಡಿದರು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಮೂವರನ್ನು ಆಯ್ಕೆ ಮಾಡಿ ಅವರಿಗೆ ಕಿಟ್ಗಳನ್ನು ಹಸ್ತಾಂತರಿಸಲಾಯಿತು.</p>.<p>ಮುಖಂಡರಾದ ವೀರಕುಮಾರ ಪಾಟೀಲ, ಕಾಂತಾ ನಾಯಿಕ, ತೇಜಶ್ವಿನಿ ನಾಯಿಕವಾಡಿ, ಅನಿಲ ಸುಣಧೋಳಿ, ಶ್ರೀಕಾಂತ ಪೂಜಾರಿ, ಬಸವರಾಜ ಬುಟಾಳಿ, ಧರೆಪ್ಪ ಠಕ್ಕಣ್ಣವರ, ಸುನೀಲ ಸಂಕ, ರಮೇಶ ಸಿಂದಗಿ, ಯಲ್ಲಪ್ಪಾ ಸಿಂಗೆ, ರಾವಸಾಬ ಐಹೊಳೆ, ನೇಮಿನಾಥ ನಂದೇಶ್ವರ, ಎಸ್.ಕೆ. ಬುಟಾಳಿ, ಶಿವಾನಂದ ಗುಡ್ಡಾಪೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>