ಈ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ‘ಅವರಿಗೆ ಆದ ಆಘಾತ ನಮಗೂ ಆಗುತ್ತದೆ ಎಂಬ ಭ್ರಮೆಯಲ್ಲಿ ವಿರೋಧ ಪಕ್ಷದವರು ಇದ್ದಾರೆ. ನಮ್ಮ ಸರ್ಕಾರಅವಧಿಯನ್ನು ಪೂರ್ಣಗೊಳಿಸಲಿದೆ. ಸೂರ್ಯೋದಯ, ಚಂದ್ರೋದಯ ಎಷ್ಟು ಸತ್ಯವೋ, ನಮ್ಮ ಸರ್ಕಾರ ಮುಂದುವರಿಯುವುದೂ ಅಷ್ಟೇ ಸತ್ಯ. ಎಲ್ಲ ನಾಯಕರೂ ಒಗಟ್ಟಾಗಿ ಹೋಗುತ್ತಿದ್ದೇವೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಪಡೆದು, ಆ ಐದು ವರ್ಷಗಳನ್ನೂ ಪೂರೈಸುತ್ತೇವೆ. ತಿಮ್ಮಾಪೂರ ಅವರು ಭ್ರಮೆಯಿಂದ ಹೊರಬರಬೇಕು’ ಎಂದರು.