ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘13 ತಿಂಗಳಾದರೂ ರಾಜ್ಯದ ಸಮ್ಮಿಶ್ರ ಸರ್ಕಾರ ಟೇಕ್ ಆಫ್ ಆಗಲೇ ಇಲ್ಲ. ಈಗ ಅವರವರಲ್ಲಿ ಕಿತ್ತಾಡಿಕೊಂಡು, ಒಬ್ಬರ ನಂತರ ಒಬ್ಬರು ರಾಜೀನಾಮೆ ನೀಡುತ್ತಿದ್ದಾರೆ. ಅಲ್ಪಮತಕ್ಕೆ ಕುಸಿಯುವ ಕಾರಣ, ಸರ್ಕಾರ ಬಿದ್ದು ಹೋಗುವುದು ನೂರಕ್ಕೆ ನೂರರಷ್ಟು ಖಚಿತ’ ಎಂದು ನುಡಿದರು.