‘ಕಾಂಗ್ರೆಸ್ ದಲ್ಲಾಳಿಗಳ ಪಕ್ಷ’ ಎಂಬ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರೇನು ಶುದ್ಧ ಇದ್ದಾರಾ? ಅವರ ಪಕ್ಷದವರು ಏನು ಮಾಡುತ್ತಿದ್ದಾರೆ ಗೊತ್ತಿಲ್ಲವೇ. ಬೆಂಗಳೂರಿನಲ್ಲಿ ಗುತ್ತಿಗೆದಾರರು, ಅಧಿಕಾರಿಗಳನ್ನು ಕೇಳಿದರೆ ಅವರೇ ಎಲ್ಲವನ್ನೂ ಹೇಳುತ್ತಾರೆ. ಬಾಯಿಗೆ ಬಂದಂತೆ ಹೇಳುವುದು ಬಿಜೆಪಿಯವರಿಗೆ ಚಾಳಿಯಾಗಿದೆ’ ಎಂದು ವಾಗ್ದಾಳಿ ನಡೆಸಿದರು.