ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಮಂಗಲಾ ಮೆಟಗುಡ್ಡಗೆ ಬಿಜೆಪಿ ನಾಯಕ ಪ್ರಭಾಕರ ಕೋರೆ ಬೆಂಬಲ

Last Updated 9 ನವೆಂಬರ್ 2021, 15:37 IST
ಅಕ್ಷರ ಗಾತ್ರ

ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆ ಬಯಸಿರುವ ಮಂಗಲಾ ಮೆಟಗುಡ್ಡ ಅವರಿಗೆ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ, ಬಿಜೆಪಿ ನಾಯಕ ಪ್ರಭಾಕರ ಕೋರೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನ.21ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಗಲಾ ಸಿದ್ಧಪಡಿಸಿರುವ ಪ್ರಣಾಳಿಕೆಯನ್ನು ಇಲ್ಲಿನ ನೆಹರೂ ನಗರದ ಕನ್ನಡ ಭವನದಲ್ಲಿ ಬಿಡುಗಡೆ ಮಾಡುವ ಮೂಲಕ ಬೆಂಬಲ ಘೋಷಿಸಿದರು.

ಈ ಸಂದರ್ಭದಲ್ಲಿ ಸಾಹಿತಿಗಳಾದ ಬಿ.ಎಸ್. ಗವಿಮಠ, ಬಸವರಾಜ ಜಗಜಂಪಿ, ಯ.ರು. ಪಾಟೀಲ, ಗುರುದೇವಿ ಹುಲೆಪ್ಪನವರಮಠ, ಮಹೇಶ ಗುರನಗೌಡರ, ಕನ್ನಡ ಹೋರಾಟಗಾರ ಶಿವನಗೌಡ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT