ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಮನೆಯಲ್ಲಿ ನಡೆದಿರುವ ಸಭೆಯಲ್ಲಿ ಅಭ್ಯರ್ಥಿಗಳೇ ಇರಲಿಲ್ಲ. ಸಚಿವರಾದ ಜಗದೀಶ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಸಿ.ಸಿ. ಪಾಟೀಲ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ, ಶಾಸಕ ಮುರುಗೇಶ ನಿರಾಣಿ ಮೊದಲಾದವರು ಪಾಲ್ಗೊಂಡು ಚರ್ಚಿಸಿದ್ದಾರೆ.