ಬೆಳಗಾವಿ: ಇಲ್ಲಿನ ದಕ್ಷಿಣ ಮತಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲದಿರುವುದನ್ನು ಖಂಡಿಸಿ, ಬಿಜೆಪಿ ಶಾಸಕ ಅಭಯ ಪಾಟೀಲ ಅವರು ತ್ಯಾಜ್ಯ ತಂದು ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಅವರ ಸರ್ಕಾರಿ ನಿವಾಸದ ಗೇಟ್ಗೆ ಸುರಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.