ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಲಖನ್ ಜಾರಕಿಹೊಳಿ ಕಾಂಗ್ರೆಸ್ನಲ್ಲಿದ್ದರು. ಈಗ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ನಮ್ಮೆಲ್ಲ ಶಾಸಕರು, ಸಂಸದರು, ಪದಾಧಿಕಾರಿಗಳು ಸೇರಿ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲು ತೀರ್ಮಾನ ಮಾಡಿದ್ದೇವೆ. ಇದೇ ನಮ್ಮ ಅಧಿಕೃತ ನಿರ್ಣಯ’ ಎಂದು ಪ್ರತಿಕ್ರಿಯಿಸಿದರು.