ಶುಕ್ರವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಗುರುರಾಜ್ ಶೆಟ್ಟಿ ಗಂಟಿಹೊಳೆ, ‘ನನ್ನ ಕ್ಷೇತ್ರದಲ್ಲಿ ಎರಡು ಬಗರ್ ಹುಕುಂ ಸಮಿತಿಗಳನ್ನು ನೇಮಿಸಲಾಗಿದೆ. ನನ್ನ ಅಧ್ಯಕ್ಷತೆಯ ಸಮಿತಿಗೆ ಕಡಿಮೆ ಪ್ರದೇಶ, ಬೇರೊಬ್ಬರ ಅಧ್ಯಕ್ಷತೆಯ ಸಮಿತಿಗೆ ಹೆಚ್ಚು ಪ್ರದೇಶವನ್ನು ಹಂಚಿಕೆ ಮಾಡಲಾಗಿದೆ. ಶಾಸಕರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ’ ಎಂದರು.