ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಹಿರಂಗವಾಗಿ ಪತ್ರ ಬರೆಯುವುದು, ಅದನ್ನು ರಾಜ್ಯಪಾಲರಿಗಾಗಲಿ ಅಥವಾ ಪಕ್ಷದ ಮೇಲಿನವರಿಗಾಗಲಿ ಕಳುಹಿಸುವಂಥದು ಆಗಬಾರದಿತ್ತು. ಏನಿದ್ದರೂ ಮುಖ್ಯಮಂತ್ರಿ ಜೊತೆಯೇ ಚರ್ಚಿಸಬೇಕಿತ್ತು. ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಬೇಕಿತ್ತು. ಇದೆಲ್ಲವೂ ನಾಲ್ಕು ಗೋಡೆಗಳ ಒಳಗೆ ಆಗಬೇಕಾಗಿತ್ತು’ ಎಂದು ಪ್ರತಿಕ್ರಿಯಿಸಿದರು.