ನಂತರ ಮಾತನಾಡಿದ ಅಭಯ, ‘ದಕ್ಷಿಣ ಮತಕ್ಷೇತ್ರದಲ್ಲಿ ₹ 800 ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಾರಂಭವಾಗಿವೆ. ಮೇ 15ರವರೆಗೆ ಶೇ 80ರಷ್ಟು ಕಾಮಗಾರಿಗಳು ಮುಕ್ತಾಯವಾಗಲಿವೆ. ರಸ್ತೆ, ಚರಂಡಿ, ಒಳಚರಂಡಿ, ವಿದ್ಯುತ್ದೀಪಗಳ ಅಳವಡಿಕೆ, ಯುಜಿ ಕೇಬಲ್ ಅಳವಡಿಕೆ, 24x7 ಕುಡಿಯುವ ನೀರು, ₹1.50 ಲಕ್ಷ ಅನುದಾನದಲ್ಲಿ ಬಡವರಿಗೆ ಮನೆ ನಿರ್ಮಾಣ, 60ಸಾವಿರ ಫಲಾನುಭವಿಗಳಿಗೆ ಆಯುಷ್ಮಾನ್-ಆರೊಗ್ಯ ಕರ್ನಾಟಕ ಕಾರ್ಡ್ ವಿತರಣೆ, ಉದ್ಯಾನಗಳ ಅಭಿವೃದ್ಧಿ, ಆಸ್ಪತ್ರೆಗಳ ಅಭಿವೃದ್ಧಿ ಹಾಗೂ ನಿರ್ಮಾಣ ಮೊದಲಾದ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಇನ್ನೆರಡು ವರ್ಷಗಳಲ್ಲಿ ನಗರವು ಸ್ಮಾರ್ಟ್ ಆಗಲಿದೆ’ ಎಂದರು.