<p><strong>ಬೆಳಗಾವಿ: </strong>ಮುಂಬರುವ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ.</p>.<p>ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ, ಪಕ್ಷದ ಟಿಕೆಟ್ ಆಕಾಂಕ್ಷಿಗಳು ಪಾಲ್ಗೊಂಡಿದ್ದರು. ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ವಾರ್ಡ್ಗಳ ಕಾರ್ಯಗಳ ಬಗ್ಗೆ ತಿಳಿಸಿದರು. ಚುನಾವಣಾ ರೂಪರೇಷೆ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.</p>.<p>ಪ್ರಥಮ ಬಾರಿಗೆ ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಸುವುದರಿಂದ ಪಕ್ಷಕ್ಕಾಗಿ ದುಡಿದವರಿಗೆ ಮಾತ್ರ ಟಿಕೆಟ್ ಕೊಡಬೇಕು. ಯಾವುದೇ ಲಾಬಿಗೆ ಮಣಿಯದೆ ನಿಷ್ಠಾವಂತ ಕಾರ್ಯಕರ್ತರಿಗೆ ಆದ್ಯತೆ ಕೊಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.</p>.<p>ನಂತರ ಮಾತನಾಡಿದ ಅಭಯ, ‘ದಕ್ಷಿಣ ಮತಕ್ಷೇತ್ರದಲ್ಲಿ ₹ 800 ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಾರಂಭವಾಗಿವೆ. ಮೇ 15ರವರೆಗೆ ಶೇ 80ರಷ್ಟು ಕಾಮಗಾರಿಗಳು ಮುಕ್ತಾಯವಾಗಲಿವೆ. ರಸ್ತೆ, ಚರಂಡಿ, ಒಳಚರಂಡಿ, ವಿದ್ಯುತ್ದೀಪಗಳ ಅಳವಡಿಕೆ, ಯುಜಿ ಕೇಬಲ್ ಅಳವಡಿಕೆ, 24x7 ಕುಡಿಯುವ ನೀರು, ₹1.50 ಲಕ್ಷ ಅನುದಾನದಲ್ಲಿ ಬಡವರಿಗೆ ಮನೆ ನಿರ್ಮಾಣ, 60ಸಾವಿರ ಫಲಾನುಭವಿಗಳಿಗೆ ಆಯುಷ್ಮಾನ್-ಆರೊಗ್ಯ ಕರ್ನಾಟಕ ಕಾರ್ಡ್ ವಿತರಣೆ, ಉದ್ಯಾನಗಳ ಅಭಿವೃದ್ಧಿ, ಆಸ್ಪತ್ರೆಗಳ ಅಭಿವೃದ್ಧಿ ಹಾಗೂ ನಿರ್ಮಾಣ ಮೊದಲಾದ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಇನ್ನೆರಡು ವರ್ಷಗಳಲ್ಲಿ ನಗರವು ಸ್ಮಾರ್ಟ್ ಆಗಲಿದೆ’ ಎಂದರು.</p>.<p>‘ಸ್ವಚ್ಛತಾ ಅಭಿಯಾನದಲ್ಲಿ ‘ಸ್ವಚ್ಛ ಸುಂದರ ವಾರ್ಡ್ ಸ್ಪರ್ಧೆ’ ಆರಂಭಿಸಲಾಗುವುದು. ಈ ಮೂಲಕ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೂ ಕ್ರಮ ವಹಿಸಲಾಗುವುದು. ಯುವಕ, ಯುವತಿಯರಿಗೆ ಉದ್ಯೋಗ ಒದಗಿಸಲು ಉದ್ಯಮಗಳ ಆರಂಭಕ್ಕೆ ಯೋಜಿಸಲಾಗಿದೆ. ಐಟಿ ಪಾರ್ಕ್ ನಿರ್ಮಾಣದ ಸಂಕಲ್ಪ ಮಾಡಲಾಗಿದೆ’ ಎಂದರು.</p>.<p>‘ಹೊಸ ಮತದಾರರ ನೋಂದಣಿಗೆ ಮತದಾರರು ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಮುಂಬರುವ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ.</p>.<p>ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ, ಪಕ್ಷದ ಟಿಕೆಟ್ ಆಕಾಂಕ್ಷಿಗಳು ಪಾಲ್ಗೊಂಡಿದ್ದರು. ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ವಾರ್ಡ್ಗಳ ಕಾರ್ಯಗಳ ಬಗ್ಗೆ ತಿಳಿಸಿದರು. ಚುನಾವಣಾ ರೂಪರೇಷೆ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.</p>.<p>ಪ್ರಥಮ ಬಾರಿಗೆ ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಸುವುದರಿಂದ ಪಕ್ಷಕ್ಕಾಗಿ ದುಡಿದವರಿಗೆ ಮಾತ್ರ ಟಿಕೆಟ್ ಕೊಡಬೇಕು. ಯಾವುದೇ ಲಾಬಿಗೆ ಮಣಿಯದೆ ನಿಷ್ಠಾವಂತ ಕಾರ್ಯಕರ್ತರಿಗೆ ಆದ್ಯತೆ ಕೊಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.</p>.<p>ನಂತರ ಮಾತನಾಡಿದ ಅಭಯ, ‘ದಕ್ಷಿಣ ಮತಕ್ಷೇತ್ರದಲ್ಲಿ ₹ 800 ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಾರಂಭವಾಗಿವೆ. ಮೇ 15ರವರೆಗೆ ಶೇ 80ರಷ್ಟು ಕಾಮಗಾರಿಗಳು ಮುಕ್ತಾಯವಾಗಲಿವೆ. ರಸ್ತೆ, ಚರಂಡಿ, ಒಳಚರಂಡಿ, ವಿದ್ಯುತ್ದೀಪಗಳ ಅಳವಡಿಕೆ, ಯುಜಿ ಕೇಬಲ್ ಅಳವಡಿಕೆ, 24x7 ಕುಡಿಯುವ ನೀರು, ₹1.50 ಲಕ್ಷ ಅನುದಾನದಲ್ಲಿ ಬಡವರಿಗೆ ಮನೆ ನಿರ್ಮಾಣ, 60ಸಾವಿರ ಫಲಾನುಭವಿಗಳಿಗೆ ಆಯುಷ್ಮಾನ್-ಆರೊಗ್ಯ ಕರ್ನಾಟಕ ಕಾರ್ಡ್ ವಿತರಣೆ, ಉದ್ಯಾನಗಳ ಅಭಿವೃದ್ಧಿ, ಆಸ್ಪತ್ರೆಗಳ ಅಭಿವೃದ್ಧಿ ಹಾಗೂ ನಿರ್ಮಾಣ ಮೊದಲಾದ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಇನ್ನೆರಡು ವರ್ಷಗಳಲ್ಲಿ ನಗರವು ಸ್ಮಾರ್ಟ್ ಆಗಲಿದೆ’ ಎಂದರು.</p>.<p>‘ಸ್ವಚ್ಛತಾ ಅಭಿಯಾನದಲ್ಲಿ ‘ಸ್ವಚ್ಛ ಸುಂದರ ವಾರ್ಡ್ ಸ್ಪರ್ಧೆ’ ಆರಂಭಿಸಲಾಗುವುದು. ಈ ಮೂಲಕ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೂ ಕ್ರಮ ವಹಿಸಲಾಗುವುದು. ಯುವಕ, ಯುವತಿಯರಿಗೆ ಉದ್ಯೋಗ ಒದಗಿಸಲು ಉದ್ಯಮಗಳ ಆರಂಭಕ್ಕೆ ಯೋಜಿಸಲಾಗಿದೆ. ಐಟಿ ಪಾರ್ಕ್ ನಿರ್ಮಾಣದ ಸಂಕಲ್ಪ ಮಾಡಲಾಗಿದೆ’ ಎಂದರು.</p>.<p>‘ಹೊಸ ಮತದಾರರ ನೋಂದಣಿಗೆ ಮತದಾರರು ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>