ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ಕಲಬುರಗಿಯಲ್ಲಿ ನಾರಾಯಣಸ್ವಾಮಿಗೆ ದಿಗ್ಬಂಧನ: ಖಂಡನೆ

Published : 23 ಮೇ 2025, 14:27 IST
Last Updated : 23 ಮೇ 2025, 14:27 IST
ಫಾಲೋ ಮಾಡಿ
Comments
ಸುಭಾಷ ಪಾಟೀಲ
ಸುಭಾಷ ಪಾಟೀಲ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಶನಿವಾರ ಕಲಬುರಗಿ ಚಲೋ ಆಯೋಜಿಸಿದ್ದು ಜಿಲ್ಲೆಯಿಂದ ಹೆಚ್ಚಿನ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ
ಸುಭಾಷ್ ಪಾಟೀಲ ಅಧ್ಯಕ್ಷ ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕ
‘ಪ್ರಧಾನಿ ನರೇಂದ್ರ ಮೋದಿ ಅವರ ಕನಸಾದ ಜನೌಷಧ ಕೇಂದ್ರಗಳನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಮುಚ್ಚಲು ಮುಂದಾಗಿದೆ. ಬಡವರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಈ ಕೇಂದ್ರಗಳನ್ನು ತೆರೆದಿದೆ. ಆದರೆ  ಔಷಧೀಯ ಕಂಪನಿಗಳ ಲಾಬಿಗೆ ಒಳಗಾಗಿರುವ ಕಾಂಗ್ರೆಸ್‌ ಬಡವರಿಗೆ ಅನ್ಯಾಯ ಮಾಡಲು ಮುಂದಾಗಿದೆ’ ಎಂದು ಪಿ.ರಾಜೀವ್‌ ಆಕ್ರೋಶ ವ್ಯಕ್ತಪಡಿಸಿದರು. ‘ಜನೌಷಧ ಮಳಿಗೆಗಳಲ್ಲಿ ಶೇ 80ರಷ್ಟು ರಿಯಾಯಿತಿ ಸಿಗುತ್ತದೆ. ಆದರೆ ಔಷಧಗಳನ್ನು ಉಚಿತವಾಗಿ ನೀಡುತ್ತೇವೆ. ಜನೌಷಧ ಕೇಂದ್ರ ಏಕೆ ಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಉಡಾಫೆ ಮಾತನಾಡುತ್ತಿದ್ದಾರೆ. ಇವರಿಗೆ 100 ಆಸ್ಪತ್ರೆಗಳಿಗೂ ಔಷಧ ಪೂರೈಕೆ ಮಾಡುವ ಸಾಮರ್ಥ್ಯವಿಲ್ಲ’ ಎಂದರು. ‘ದಿನೇಶ ಗುಂಡೂರಾವ್ ಅವರು ಔಷಧೀಯ ಕಂಪನಿಗಳಿಂದ ‘ಕಿಕ್‌ಬ್ಯಾಕ್‌’ ಪಡೆದಿದ್ದಾರೆ. ಇವರಿಗೆ ಬಡವರ ಮೇಲೆ ಕರುಣೆಯೇ ಇಲ್ಲ’ ಎಂದೂ ದೂರಿದರು.
ಜಗದೀಶ ಶೆಟ್ಟರ್‌
ಜಗದೀಶ ಶೆಟ್ಟರ್‌
‘ಕಾಂಗ್ರೆಸ್‌ನ ಗೂಂಡಾ ಆಡಳಿತಕ್ಕೆ ಸಾಕ್ಷಿ’
‘ಸಾಂವಿಧಾನಿಕ ಹುದ್ದೆ ವಿಪಕ್ಷದ ನಾಯಕ ಸ್ಥಾನದಲ್ಲಿರುವ ಶೋಷಿತ ಸಮುದಾಯಗಳ ನಾಯಕರೂ ಆದ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ’ ಎಂದು ಸಂಸದ ಜಗದೀಶ ಶೆಟ್ಟರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಈ ಘಟನೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಎತ್ತಿ ತೋರಿಸುತ್ತದೆ. ಅವರ ಕಾರಿನ ಮೇಲೆ ಮೊಟ್ಟೆ ಒಡೆದು ಶಾಹಿ ಹಾಕಿ ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಾಂವಿಧಾನಿಕ ಹುದ್ದೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಗೌರವವಿದ್ದರೆ ಈ ಕೂಡಲೇ ನಾರಾಯಣಸ್ವಾಮಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು. ದಿಗ್ಬಂಧನ ವಿಧಿಸಿದ ಗೂಂಡಾಗಳ ಮೇಲೆ ಕಠಿಣ ಕ್ರಮ ಜರುಗಿಸಲಿ’ ಎಂದು ಆಗ್ರಹಿಸಿದ್ದಾರೆ. ‘ಭಯೋತ್ಪಾದಕರನ್ನು ಗೂಂಡಾಗಳನ್ನು ಬೆಂಬಲಿಸುವ ಇವರ ನಡೆಯು ಅತ್ಯಂತ ಖಂಡನೀಯ. ಈ ಮನಸ್ಥಿತಿಯನ್ನು ಇನ್ನಾದರೂ ಕಾಂಗ್ರೆಸ್ಸಿಗರು ಬದಲಾಯಿಸಿಕೊಳ್ಳಲಿ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT