<p><strong>ಬೆಳಗಾವಿ:</strong> ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ ವಿರೋಧಿಸಿ, ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.</p><p>ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ‘ಈ ಮಸೂದೆ ಹಿಂದಕ್ಕೆ ಪಡೆಯಬೇಕು’ ಎಂದು ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.</p><p>‘ಈ ಮಸೂದೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಇದು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ತಂತ್ರವಾಗಿದ್ದು, ಸಂವಿಧಾನ ನೀಡಿದ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವೂ ಇದಾಗಿದೆ’ ಎಂದು ಆರೋಪಿಸಿದರು.</p><p>‘ದ್ವೇಷ ಭಾಷಣಕ್ಕೆ ಸರ್ಕಾರ ನೀಡಿದ ವ್ಯಾಖ್ಯಾನ ಅಸ್ಪಷ್ಟವಾಗಿದೆ. ಸರ್ಕಾರದ ಜನವಿರೋಧಿ ನೀತಿಗಳನ್ನು ಟೀಕಿಸುವುದು, ಸಾಮಾಜಿಕವಾಗಿ ಚರ್ಚಿಸುವುದನ್ನು ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ವಿರೋಧ ಪಕ್ಷದವರಷ್ಟೇ ಅಲ್ಲ; ಜನಸಾಮಾನ್ಯರನ್ನೂ ಅಪರಾಧಿಗಳಾಗಿ ನೋಡುವ ಈ ಕಾಯ್ದೆ ನಮಗೆ ಬೇಕೇ?’ ಎಂದು ಪ್ರಶ್ನಿಸಿದರು.</p><p>ಮಾಜಿ ಶಾಸಕ ಸಂಜಯ ಪಾಟೀಲ, ‘ಭ್ರಷ್ಟಾಚಾರದಲ್ಲಿ ಮುಳುಗಿದ ರಾಜ್ಯ ಸರ್ಕಾರದ ಅಧಿಕಾರವಧಿಯಲ್ಲಿ ಅನೇಕ ಹಗರಣ ನಡೆದಿವೆ. ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿವೆ. ಅಭಿವೃದ್ಧಿ ಬದಲಿಗೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಿತ್ತಾಟವನ್ನೇ ನೋಡುವಂತಾಗಿದೆ. ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಕಡಿವಾಣ ಹಾಕಲು ತಂದಿರುವ ಈ ಮಸೂದೆ ವಿರೋಧಿಸಿ ಪ್ರತಿಭಟಿಸುತ್ತಿದ್ದೇವೆ’ ಎಂದರು.</p><p>ಮುಖಂಡರಾದ ಎಂ.ಬಿ.ಝಿರಲಿ, ಗೀತಾ ಸುತಾರ, ಯುವರಾಜ ಜಾಧವ, ಉಜ್ವಲಾ ಬಡವನ್ನಾಚೆ, ಮುರುಘೇಂದ್ರಗೌಡ ಪಾಟೀಲ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ ವಿರೋಧಿಸಿ, ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.</p><p>ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ‘ಈ ಮಸೂದೆ ಹಿಂದಕ್ಕೆ ಪಡೆಯಬೇಕು’ ಎಂದು ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.</p><p>‘ಈ ಮಸೂದೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಇದು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ತಂತ್ರವಾಗಿದ್ದು, ಸಂವಿಧಾನ ನೀಡಿದ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವೂ ಇದಾಗಿದೆ’ ಎಂದು ಆರೋಪಿಸಿದರು.</p><p>‘ದ್ವೇಷ ಭಾಷಣಕ್ಕೆ ಸರ್ಕಾರ ನೀಡಿದ ವ್ಯಾಖ್ಯಾನ ಅಸ್ಪಷ್ಟವಾಗಿದೆ. ಸರ್ಕಾರದ ಜನವಿರೋಧಿ ನೀತಿಗಳನ್ನು ಟೀಕಿಸುವುದು, ಸಾಮಾಜಿಕವಾಗಿ ಚರ್ಚಿಸುವುದನ್ನು ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ವಿರೋಧ ಪಕ್ಷದವರಷ್ಟೇ ಅಲ್ಲ; ಜನಸಾಮಾನ್ಯರನ್ನೂ ಅಪರಾಧಿಗಳಾಗಿ ನೋಡುವ ಈ ಕಾಯ್ದೆ ನಮಗೆ ಬೇಕೇ?’ ಎಂದು ಪ್ರಶ್ನಿಸಿದರು.</p><p>ಮಾಜಿ ಶಾಸಕ ಸಂಜಯ ಪಾಟೀಲ, ‘ಭ್ರಷ್ಟಾಚಾರದಲ್ಲಿ ಮುಳುಗಿದ ರಾಜ್ಯ ಸರ್ಕಾರದ ಅಧಿಕಾರವಧಿಯಲ್ಲಿ ಅನೇಕ ಹಗರಣ ನಡೆದಿವೆ. ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿವೆ. ಅಭಿವೃದ್ಧಿ ಬದಲಿಗೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಿತ್ತಾಟವನ್ನೇ ನೋಡುವಂತಾಗಿದೆ. ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಕಡಿವಾಣ ಹಾಕಲು ತಂದಿರುವ ಈ ಮಸೂದೆ ವಿರೋಧಿಸಿ ಪ್ರತಿಭಟಿಸುತ್ತಿದ್ದೇವೆ’ ಎಂದರು.</p><p>ಮುಖಂಡರಾದ ಎಂ.ಬಿ.ಝಿರಲಿ, ಗೀತಾ ಸುತಾರ, ಯುವರಾಜ ಜಾಧವ, ಉಜ್ವಲಾ ಬಡವನ್ನಾಚೆ, ಮುರುಘೇಂದ್ರಗೌಡ ಪಾಟೀಲ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>