‘ಕಾಂಗ್ರೆಸ್ಗೆ ಒಂದು ನಿಲುವಿಲ್ಲ, ಅದೊಂದು ಬಸ್ ಸ್ಟ್ಯಾಂಡ್ ಆಗಿದೆ’ ಎಂಬ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಎಲ್ಲರ ಕೈ ಹಿಡಿದಿದ್ದಾರೆ. ತಮಿಳುನಾಡಿನಲ್ಲಿ ಎಐಎಡಿಂಕೆ ಕೈ ಹಿಡಿದಿಲ್ಲವೇ? ಸಂವಿಧಾನದ ರಕ್ಷಣೆಗೆ ಮತ್ತು ಅದರ ಏಳಿಗೆಗಾಗಿ ಒಗ್ಗೂಡಿ ನಾವು ಕೆಲಸ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಹಯೋಗ ತಪ್ಪಲ್ಲ’ ಎಂದು ತಿಳಿಸಿದರು.