<p><strong>ಬೆಳಗಾವಿ</strong>: ‘ಗ್ರಾಮ ಪಂಚಾಯಿತಿಯಿಂದ ಹಿಡಿದು ವಿಧಾನಸೌಧದವರೆಗೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಕಯನ್ನೇ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಜ್ಜಾಗಬೇಕು’ ಎಂದು ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಕರೆ ನೀಡಿದರು.</p>.<p>ಹಿಂಡಲಗಾದಲ್ಲಿ ಗುರುವಾರ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲದ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ನೂತನ ಕಾರ್ಯಾಲಯವು ಪಕ್ಷದ ಸಂಘಟನಾತ್ಮಕ ಕಾರ್ಯಚಟುವಟಿಕೆಗಳನ್ನು ಮಾಡಲು ಅನುಕೂಲವಾಗಲಿದೆ. ಕಾರ್ಯಕರ್ತರು ಇದನ್ನು ಬಳಸಿಕೊಳ್ಳಬೇಕು’ ಎಂದರು.</p>.<p>ಸಂಸದ ಜಗದೀಶ ಶೆಟ್ಟರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.</p>.<p>ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಮುಖಂಡರಾದ ಎಂ.ಬಿ.ಜಿರಲಿ, ಗ್ರಾಮೀಣ ಮಂಡಲದ ಬಿಜೆಪಿ ಅಧ್ಯಕ್ಷ ಯುವರಾಜ್ ಜಾಧವ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ರಾಮಚಂದ್ರ ಮನ್ನೊಳಕರ, ಪ್ರಮುಖರು ಪಾಲ್ಗೊಂಡರು.</p>.<p>ಉಪಾಧ್ಯಾಯ ಜನ್ಮದಿನ: ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾವಚಿತ್ರಕ್ಕೆ ಸುಭಾಷ್ ಪಾಟೀಲ ಪುಷ್ಪ ನಮನ ಸಲ್ಲಿಸಿದರು. ಉಪಾಧ್ಯಾಯ ಅವರ ತ್ಯಾಗ ಹಾಗೂ ಸಂಘಟನಾ ಚಾತುರ್ಯದ ಬಗ್ಗೆ ಮುಖಂಡರು ಬಣ್ಣನೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಗ್ರಾಮ ಪಂಚಾಯಿತಿಯಿಂದ ಹಿಡಿದು ವಿಧಾನಸೌಧದವರೆಗೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಕಯನ್ನೇ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಜ್ಜಾಗಬೇಕು’ ಎಂದು ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಕರೆ ನೀಡಿದರು.</p>.<p>ಹಿಂಡಲಗಾದಲ್ಲಿ ಗುರುವಾರ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲದ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ನೂತನ ಕಾರ್ಯಾಲಯವು ಪಕ್ಷದ ಸಂಘಟನಾತ್ಮಕ ಕಾರ್ಯಚಟುವಟಿಕೆಗಳನ್ನು ಮಾಡಲು ಅನುಕೂಲವಾಗಲಿದೆ. ಕಾರ್ಯಕರ್ತರು ಇದನ್ನು ಬಳಸಿಕೊಳ್ಳಬೇಕು’ ಎಂದರು.</p>.<p>ಸಂಸದ ಜಗದೀಶ ಶೆಟ್ಟರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.</p>.<p>ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಮುಖಂಡರಾದ ಎಂ.ಬಿ.ಜಿರಲಿ, ಗ್ರಾಮೀಣ ಮಂಡಲದ ಬಿಜೆಪಿ ಅಧ್ಯಕ್ಷ ಯುವರಾಜ್ ಜಾಧವ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ರಾಮಚಂದ್ರ ಮನ್ನೊಳಕರ, ಪ್ರಮುಖರು ಪಾಲ್ಗೊಂಡರು.</p>.<p>ಉಪಾಧ್ಯಾಯ ಜನ್ಮದಿನ: ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾವಚಿತ್ರಕ್ಕೆ ಸುಭಾಷ್ ಪಾಟೀಲ ಪುಷ್ಪ ನಮನ ಸಲ್ಲಿಸಿದರು. ಉಪಾಧ್ಯಾಯ ಅವರ ತ್ಯಾಗ ಹಾಗೂ ಸಂಘಟನಾ ಚಾತುರ್ಯದ ಬಗ್ಗೆ ಮುಖಂಡರು ಬಣ್ಣನೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>