<p><strong>ಬೆಳಗಾವಿ: </strong>ಕೇಂದ್ರದಲ್ಲಿ ತಮ್ಮದೇ ಸರ್ಕಾರ ಇದ್ದಾಗಲೂ ರಾಜ್ಯಕ್ಕೆ ನಯಾಪೈಸೆ ಅನುದಾನ ತರದ ಬಿಜೆಪಿ ನಾಯಕರು, ಬರ ಅಧ್ಯಯನ ಹೆಸರಿನಲ್ಲಿ ರಾಜ್ಯ ಸುತ್ತುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂದು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಎನ್.ಎಚ್. ಕೋನರಡ್ಡಿ ಪ್ರಶ್ನಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸುತ್ತುವ ಬದಲು ಬಿಜೆಪಿ ನಾಯಕರು ದೆಹಲಿಗೆ ಹೋಗಿ, ರಾಜ್ಯಕ್ಕೆ ಅನುದಾನ ತರಲಿ ಎಂದು ಸವಾಲು ಹಾಕಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯು ಹಗರಣದ ಕೂಪವಾಗಿದೆ. ರೈತರಿಗಿಂತ ಹೆಚ್ಚು ವಿಮಾ ಕಂಪನಿಗಳಿಗೆ ಲಾಭ ಮಾಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಸುಪ್ರೀಂ ಕೋರ್ಟ್ ಉನ್ನತ ಸಮಿತಿ ಮೂಲಕ ತನಿಖೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ ಎಂದರು.</p>.<p>ಬಿಜೆಪಿ ಮುಖಂಡರ ಮಾಲೀಕತ್ವದ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬು ಬೆಳೆಗಾರರ ಹಣವನ್ನು ತಕ್ಷಣ ಪಾವತಿಸುವಂತೆ ಆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೂಚಿಸಲಿ ಎಂದು ಸವಾಲು ಹಾಕಿದರು.</p>.<p>ವಿಧಾನಮಂಡಲ ಚಳಿಗಾಲದ ಅಧಿವೇಶನದ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿರುವ ಬಿಜೆಪಿ ನಾಯಕರು, ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಅವರ ಮೇಲೆ ಒತ್ತಡ ಹೇರಲಿ ಎಂದು ಒತ್ತಾಯಿಸಿದರು.</p>.<p>ಮಹದಾಯಿ ನ್ಯಾಯಮಂಡಳಿ ತೀರ್ಪು ನೀಡಿ ಹಲವು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಗೋವಾದತ್ತ ಒಲವು ಹೊಂದಿದ್ದೆ ಇದಕ್ಕೆ ಕಾರಣ. ಹೀಗಾಗಿ, ರಾಜ್ಯಕ್ಕೆ ಬರಬೇಕಾದ ಮಹದಾಯಿ ನೀರು ಇನ್ನೂ ಬಂದಿಲ್ಲ ಎಂದರು.</p>.<p>ಜಿಲ್ಲಾ ಜೆಡಿಎಸ್ ಅಧ್ಯಕ್ಷ ಶಂಕರ ಮಾಡಲಗಿ, ಶಿವನಗೌಡ ಪಾಟೀಲ, ಮಾಡೆವಳ್ಳಿ, ಗಿರೀಶ ಗೋಕಾಕ, ಪ್ರಕಾಶ ಹುಣಾಳಕರ, ಸತೀಶ ಒಂಟಗೂಡಿ, ಪಠಾಣ, ಜಿ.ಎಲ್. ಹುರಳಿ, ಸಂತೋಷ ಉಪಾಧ್ಯ, ವೀರಣ್ಣ ರೇವಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಕೇಂದ್ರದಲ್ಲಿ ತಮ್ಮದೇ ಸರ್ಕಾರ ಇದ್ದಾಗಲೂ ರಾಜ್ಯಕ್ಕೆ ನಯಾಪೈಸೆ ಅನುದಾನ ತರದ ಬಿಜೆಪಿ ನಾಯಕರು, ಬರ ಅಧ್ಯಯನ ಹೆಸರಿನಲ್ಲಿ ರಾಜ್ಯ ಸುತ್ತುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂದು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಎನ್.ಎಚ್. ಕೋನರಡ್ಡಿ ಪ್ರಶ್ನಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸುತ್ತುವ ಬದಲು ಬಿಜೆಪಿ ನಾಯಕರು ದೆಹಲಿಗೆ ಹೋಗಿ, ರಾಜ್ಯಕ್ಕೆ ಅನುದಾನ ತರಲಿ ಎಂದು ಸವಾಲು ಹಾಕಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯು ಹಗರಣದ ಕೂಪವಾಗಿದೆ. ರೈತರಿಗಿಂತ ಹೆಚ್ಚು ವಿಮಾ ಕಂಪನಿಗಳಿಗೆ ಲಾಭ ಮಾಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಸುಪ್ರೀಂ ಕೋರ್ಟ್ ಉನ್ನತ ಸಮಿತಿ ಮೂಲಕ ತನಿಖೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ ಎಂದರು.</p>.<p>ಬಿಜೆಪಿ ಮುಖಂಡರ ಮಾಲೀಕತ್ವದ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬು ಬೆಳೆಗಾರರ ಹಣವನ್ನು ತಕ್ಷಣ ಪಾವತಿಸುವಂತೆ ಆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೂಚಿಸಲಿ ಎಂದು ಸವಾಲು ಹಾಕಿದರು.</p>.<p>ವಿಧಾನಮಂಡಲ ಚಳಿಗಾಲದ ಅಧಿವೇಶನದ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿರುವ ಬಿಜೆಪಿ ನಾಯಕರು, ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಅವರ ಮೇಲೆ ಒತ್ತಡ ಹೇರಲಿ ಎಂದು ಒತ್ತಾಯಿಸಿದರು.</p>.<p>ಮಹದಾಯಿ ನ್ಯಾಯಮಂಡಳಿ ತೀರ್ಪು ನೀಡಿ ಹಲವು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಗೋವಾದತ್ತ ಒಲವು ಹೊಂದಿದ್ದೆ ಇದಕ್ಕೆ ಕಾರಣ. ಹೀಗಾಗಿ, ರಾಜ್ಯಕ್ಕೆ ಬರಬೇಕಾದ ಮಹದಾಯಿ ನೀರು ಇನ್ನೂ ಬಂದಿಲ್ಲ ಎಂದರು.</p>.<p>ಜಿಲ್ಲಾ ಜೆಡಿಎಸ್ ಅಧ್ಯಕ್ಷ ಶಂಕರ ಮಾಡಲಗಿ, ಶಿವನಗೌಡ ಪಾಟೀಲ, ಮಾಡೆವಳ್ಳಿ, ಗಿರೀಶ ಗೋಕಾಕ, ಪ್ರಕಾಶ ಹುಣಾಳಕರ, ಸತೀಶ ಒಂಟಗೂಡಿ, ಪಠಾಣ, ಜಿ.ಎಲ್. ಹುರಳಿ, ಸಂತೋಷ ಉಪಾಧ್ಯ, ವೀರಣ್ಣ ರೇವಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>