‘ಅತ್ಯಂತ ಸೂಕ್ಷ್ಮ ವಿಚಾರ ಇದಾಗಿರುವುದರಿಂದ ಮಾರ್ಕೆಟ್ ಠಾಣೆ ಇನ್ಸ್ಪೆಕ್ಟರ್ ವರದಿ ಅಧರಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಎಂಇಎಸ್ ಪದಾಧಿಕಾರಿಗಳಾದ ದೀಪಕ ದಳವಿ, ಮನೋಹರ ಕಿಣೇಕರ, ಮಾಳೋಜಿ ಅಷ್ಟೇಕರ ಹಾಗೂ ನಿಂಗೋಜಿ ಉದ್ದಾರ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ನಗರದಲ್ಲಿ ಶಾಂತಿ ಕಾಪಾಡುವುದು ಹಾಗೂ ಒಳ್ಳೆಯ ನಡತೆ ಕುರಿತು ವರ್ಷದ ಅವಧಿಗೆ ಅವರಿಂದ ತಲಾ ₹ 5 ಲಕ್ಷಗಳ ಸ್ವಯಂ ಮುಚ್ಚಳಿಕೆ ನೀಡಬೇಕು. ಅಷ್ಟೇ ಮೊತ್ತದ ಮುಚ್ಚಳಿಕೆಯನ್ನು ಬೇರೆ ಇಬ್ಬರಿಂದ ಬರೆಸಿಕೊಂಡು ಅ.31ರ ಸಂಜೆ 4ಕ್ಕೆ ತಮ್ಮ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ’ ಎಂದು ‘ಪ್ರಜಾವಾಣಿ’ಗೆ ಸ್ಪಷ್ಟಪಡಿಸಿದರು.