‘ಕರ್ನಾಟಕ ಸರ್ಕಾರ ಬೆಳಗಾವಿಯಲ್ಲಿರುವ ಮರಾಠಿ ಭಾಷಿಕರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ರಾಜ್ಯೋತ್ಸವದಂದು ಸೈಕಲ್ ರ್ಯಾಲಿ ನಡೆಸಲು ನಮಗೆ ಅನುಮತಿ ಕೊಡುತ್ತಿಲ್ಲ. ಹೀಗಾಗಿ, ನಮ್ಮ ಪರವಾಗಿ ನೀವು ಮಹಾರಾಷ್ಟ್ರದಲ್ಲಿ ಕರಾಳ ದಿನ ಆಚರಿಸಿ, ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಬೇಕು. ಈ ಮೂಲಕ ಬೆಳಗಾವಿಯಲ್ಲಿರುವ ಮರಾಠಿಗರನ್ನು ಬೆಂಬಲಿಸಬೇಕು’ ಎಂದು ಎಂಇಎಸ್ ನಾಯಕರು ಮಹಾರಾಷ್ಟ್ರದ ಮುಖ್ಯಮಂತ್ರಿ, ಸಚಿವರು ಹಾಗೂ ಶರದ್ ಪವಾರ್ ಮೊದಲಾದ ನಾಯಕರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.