<p>ಬೆಳಗಾವಿ: ‘ಇಲ್ಲಿನ ಬಿಮ್ಸ್ ಸಂಸ್ಥೆ (ಜಿಲ್ಲಾಸ್ಪತ್ರೆ)ಯಲ್ಲಿ 26 ದಿನಗಳಲ್ಲಿ 100 ಕಪ್ಪು ಶಿಲೀಂದ್ರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ’ ಎಂದು ಪ್ರಭಾರ ನಿರ್ದೇಶಕ ಡಾ.ಉಮೇಶ ಕುಲಕರ್ಣಿ ತಿಳಿಸಿದ್ದಾರೆ.</p>.<p>ಈ ಬಗ್ಗೆ ಸೋಮವಾರ ಪ್ರಕಟಣೆ ನೀಡಿರುವ ಅವರು, ‘ಸಂಸ್ಥೆಯಲ್ಲಿ ಮೇ 26ರಂದು ಮೊದಲ ಪ್ರಕರಣ ವರದಿಯಾಗಿತ್ತು. ಮೇ 28ರಂದು ಮೊದಲ ಶಸ್ತ್ರಚಿಕಿತ್ಸೆ ನಿರ್ವಹಿಸಲಾಗಿತ್ತು. ಮೊದಲು ಸಿಬ್ಬಂದಿ ಕೊರತೆಯಿಂದ ದಿನಕ್ಕೆ 2ರಿಂದ 3 ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿತ್ತು’ ಎಂದಿದ್ದಾರೆ.</p>.<p>‘ನಂತರ ಪ್ರಾದೇಶಿಕ ಆಯುಕ್ತರು ಹಾಗೂ ಆಡಳಿತಾತ್ಮಕ ವ್ಯವಸ್ಥೆಯ ಮೇಲ್ತುವಾರಿ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಬೇರೆ ಸಂಸ್ಥೆಗಳಿಂದ ಇ.ಎನ್.ಟಿ. ವೈದ್ಯರನ್ನು, ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ನಿಯೋಜನೆ ಮಾಡಿಸಿ ಸಹಕರಿಸಿದ್ದಾರೆ. ಇದರಿಂದ ಸದ್ಯ ನಿತ್ಯ ಸರಾಸರಿ 6 ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಸದ್ಯ 95 ರೋಗಿಗಳು ದಾಖಲಾಗಿದ್ದು, 60 ರೋಗಿಗಳಿಗೆ ಕಣ್ಣಿನ ಬಳಿ ಸಮಸ್ಯೆ (ಐ ಇನ್ವಾಲ್ವ್ಮೆಂಟ್) ಕಂಡುಬಂದಿದೆ. 35 ರೋಗಿಗಳಿಗೆ ಕಣ್ಣಿನ ಬಳಿ ಚುಚ್ಚುಮದ್ದು ನೀಡಿದ್ದು, ಅವರೆಲ್ಲರ ದೃಷ್ಟಿಯಲ್ಲಿ ಸುಧಾರಣೆ ಕಂಡುಬಂದಿದೆ. ಸಂಸ್ಥೆಯ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸರ್ಕಾರಿ ಶುಶ್ರೂಷಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಕೋವಿಡ್ ರೋಗಿಗಳಿಗೆ ಯೋಗಾಭ್ಯಾಸ ಮಾಡಿಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಇಲ್ಲಿನ ಬಿಮ್ಸ್ ಸಂಸ್ಥೆ (ಜಿಲ್ಲಾಸ್ಪತ್ರೆ)ಯಲ್ಲಿ 26 ದಿನಗಳಲ್ಲಿ 100 ಕಪ್ಪು ಶಿಲೀಂದ್ರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ’ ಎಂದು ಪ್ರಭಾರ ನಿರ್ದೇಶಕ ಡಾ.ಉಮೇಶ ಕುಲಕರ್ಣಿ ತಿಳಿಸಿದ್ದಾರೆ.</p>.<p>ಈ ಬಗ್ಗೆ ಸೋಮವಾರ ಪ್ರಕಟಣೆ ನೀಡಿರುವ ಅವರು, ‘ಸಂಸ್ಥೆಯಲ್ಲಿ ಮೇ 26ರಂದು ಮೊದಲ ಪ್ರಕರಣ ವರದಿಯಾಗಿತ್ತು. ಮೇ 28ರಂದು ಮೊದಲ ಶಸ್ತ್ರಚಿಕಿತ್ಸೆ ನಿರ್ವಹಿಸಲಾಗಿತ್ತು. ಮೊದಲು ಸಿಬ್ಬಂದಿ ಕೊರತೆಯಿಂದ ದಿನಕ್ಕೆ 2ರಿಂದ 3 ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿತ್ತು’ ಎಂದಿದ್ದಾರೆ.</p>.<p>‘ನಂತರ ಪ್ರಾದೇಶಿಕ ಆಯುಕ್ತರು ಹಾಗೂ ಆಡಳಿತಾತ್ಮಕ ವ್ಯವಸ್ಥೆಯ ಮೇಲ್ತುವಾರಿ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಬೇರೆ ಸಂಸ್ಥೆಗಳಿಂದ ಇ.ಎನ್.ಟಿ. ವೈದ್ಯರನ್ನು, ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ನಿಯೋಜನೆ ಮಾಡಿಸಿ ಸಹಕರಿಸಿದ್ದಾರೆ. ಇದರಿಂದ ಸದ್ಯ ನಿತ್ಯ ಸರಾಸರಿ 6 ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಸದ್ಯ 95 ರೋಗಿಗಳು ದಾಖಲಾಗಿದ್ದು, 60 ರೋಗಿಗಳಿಗೆ ಕಣ್ಣಿನ ಬಳಿ ಸಮಸ್ಯೆ (ಐ ಇನ್ವಾಲ್ವ್ಮೆಂಟ್) ಕಂಡುಬಂದಿದೆ. 35 ರೋಗಿಗಳಿಗೆ ಕಣ್ಣಿನ ಬಳಿ ಚುಚ್ಚುಮದ್ದು ನೀಡಿದ್ದು, ಅವರೆಲ್ಲರ ದೃಷ್ಟಿಯಲ್ಲಿ ಸುಧಾರಣೆ ಕಂಡುಬಂದಿದೆ. ಸಂಸ್ಥೆಯ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸರ್ಕಾರಿ ಶುಶ್ರೂಷಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಕೋವಿಡ್ ರೋಗಿಗಳಿಗೆ ಯೋಗಾಭ್ಯಾಸ ಮಾಡಿಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>