ಈ ಬಗ್ಗೆ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಜಮಖಂಡಿ, ‘ಶಿವಸೇನಾ ಕಾರ್ಯಕರ್ತರು ಕೊಲ್ಹಾಪುರದಲ್ಲಿ ಕನ್ನಡದ ಫಲಕಗಳಿಗೆ ಮಸಿ ಬಳಿದಿರುವುದು ಖಂಡನೀಯ. ಅವರ ನಡವಳಿಕೆಯನ್ನು ಸಹಿಸಲಾಗುವುದಿಲ್ಲ. ಕನ್ನಡಿಗರನ್ನು ಕೆಣಕುವುದು ಸರಿಯಲ್ಲ. ಇಲ್ಲಿ ನಾವು ಹಾಗೂ ಮರಾಠಿ ಭಾಷಿಗರು ಸೌಹಾರ್ದದಿಂದ ಇದ್ದೇವೆ. ಬೆಳಗಾವಿಯಲ್ಲೂ ವಿವಿಧ ಭಾಷೆಯ ನಾಮಫಲಕಗಳನ್ನು ವರ್ತಕರು ಹಾಕಿದ್ದಾರೆ. ಆದರೆ, ನಾವು ಮಸಿ ಬಳಿಯುವ ಕಾರ್ಯಾಚರಣೆ ನಡೆಸಿಲ್ಲ. ಶಿವಸೇನೆಯವರು ಪುಂಡಾಟಿಕೆ ಮುಂದುವರಿಸಿದ್ದೇ ಆದಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.