<p><strong>ಬೆಳಗಾವಿ</strong>: ತಾಲ್ಲೂಕಿನ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಭಾನುವಾರ ಭೇಟಿ ನೀಡಿದ ತಜ್ಞರ ತಂಡವು ನಾಲ್ಕು ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿತು.</p><p>ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಬೆಂಗಳೂರು ಶಾಖೆಯ ತಜ್ಞ ಡಾ.ಚಂದ್ರಶೇಖರ ಎನ್., ಬನ್ನೇರುಘಟ್ಟ ಶಾಖೆ ತಜ್ಞ ಡಾ.ಮಂಜುನಾಥ ವಿ., ಕರ್ನಾಟಕ ಮೃಗಾಲಯಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ</p><p>ಡಾ.ಸುನೀಲ್ ಪನ್ವಾರ್ ಅವರ ತಂಡ ಭಾನುವಾರ ಬೆಳಿಗ್ಗೆ ಕಿರು ಮೃಗಾಲಯಕ್ಕೆ ಭೇಟಿ ನೀಡಿತು.</p><p>ಬ್ಯಾಕ್ಟೀರಿಯಾ ಸೋಂಕಿನಿಂದ(ಗಳಲೆ ಕಾಯಿಲೆಯಿಂದ) ಗುರುವಾರ 20, ಶನಿವಾರ 8 ಕೃಷ್ಣಮೃಗ ಮೃತಪಟ್ಟಿದ್ದವು. ಈ ಪೈಕಿ 25 ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಕ್ರಿಯೆ ನಡೆಸಲಾಗಿತ್ತು. </p><p>ಮೂರು ಕಳೇಬರಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಅವುಗಳ ಜತೆಗೆ, ಶನಿವಾರ ತಡರಾತ್ರಿ ಮೃತಪಟ್ಟ ಮತ್ತೊಂದು ಕೃಷ್ಣಮೃಗದ ಮರಣೋತ್ತರ ಪರೀಕ್ಷೆಯನ್ನು ತಜ್ಞರ ತಂಡ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ತಾಲ್ಲೂಕಿನ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಭಾನುವಾರ ಭೇಟಿ ನೀಡಿದ ತಜ್ಞರ ತಂಡವು ನಾಲ್ಕು ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿತು.</p><p>ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಬೆಂಗಳೂರು ಶಾಖೆಯ ತಜ್ಞ ಡಾ.ಚಂದ್ರಶೇಖರ ಎನ್., ಬನ್ನೇರುಘಟ್ಟ ಶಾಖೆ ತಜ್ಞ ಡಾ.ಮಂಜುನಾಥ ವಿ., ಕರ್ನಾಟಕ ಮೃಗಾಲಯಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ</p><p>ಡಾ.ಸುನೀಲ್ ಪನ್ವಾರ್ ಅವರ ತಂಡ ಭಾನುವಾರ ಬೆಳಿಗ್ಗೆ ಕಿರು ಮೃಗಾಲಯಕ್ಕೆ ಭೇಟಿ ನೀಡಿತು.</p><p>ಬ್ಯಾಕ್ಟೀರಿಯಾ ಸೋಂಕಿನಿಂದ(ಗಳಲೆ ಕಾಯಿಲೆಯಿಂದ) ಗುರುವಾರ 20, ಶನಿವಾರ 8 ಕೃಷ್ಣಮೃಗ ಮೃತಪಟ್ಟಿದ್ದವು. ಈ ಪೈಕಿ 25 ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಕ್ರಿಯೆ ನಡೆಸಲಾಗಿತ್ತು. </p><p>ಮೂರು ಕಳೇಬರಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಅವುಗಳ ಜತೆಗೆ, ಶನಿವಾರ ತಡರಾತ್ರಿ ಮೃತಪಟ್ಟ ಮತ್ತೊಂದು ಕೃಷ್ಣಮೃಗದ ಮರಣೋತ್ತರ ಪರೀಕ್ಷೆಯನ್ನು ತಜ್ಞರ ತಂಡ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>