ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಅನಿಲ ಮಾತನಾಡಿ, ‘ಕೊರೊನಾ ವೈರಾಣುವಿನ ಪರಿಣಾಮದಿಂದ ಜಿಲ್ಲೆಗಳಲ್ಲಿ ರಕ್ತದ ಕೊರತೆ ಉಂಟಾಗಬಾರದು. ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ರಕ್ತ ನಿಧಿ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರಗಳನ್ನು ಆಯೋಜಿಸಬೇಕು. ಇದಕ್ಕೆ ಸ್ಥಳೀಯ ಸರ್ಕಾರಿ ಹಾಗೂ ಸರ್ಕಾರೇತರ ರಕ್ತ ನಿಧಿ ಕೇಂದ್ರಗಳು, ಲಯನ್ಸ್, ರೆಡ್ಕ್ರಾಸ್ ಸಂಸ್ಥೆ, ರೋಟರಿ ಕ್ಲಬ್, ವಿವಿಧ ಕಾಲೇಜುಗಳು, ಸಾಮಾಜಿಕ ಸಂಘ ಸಂಸ್ಥೆಗಳು, ಯುವ ಸಂಘಟನೆಗಳು, ರೆಡ್ ರಿಬ್ಬನ್ ಕ್ಲಬ್ಗಳು ಕೈಜೋಡಿಸಬೇಕು’ ಎಂದು ಹೇಳಿದರು.