<p><strong>ಬೆಳಗಾವಿ</strong>: ‘ರಕ್ತ ದಾನದಿಂದ ನಮ್ಮ ದೇಹದಲ್ಲಿನ ರಕ್ತ ಕಡಿಮೆಯಾಗುತ್ತದೆ. ಶಕ್ತಿ ಕುಂದುತ್ತದೆ ಎನ್ನುವುದು ತಪ್ಪು ಕಲ್ಪನೆಯಾಗಿದೆ’ ಎಂದು ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ತಿಳಿಸಿದರು.</p>.<p>ಆಸ್ಪತ್ರೆಯಲ್ಲಿ ಭಾನುವಾರ ನಡೆದ ವಿಶ್ವ ರಕ್ತ ದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದಾನಗಳಲ್ಲಿ ರಕ್ತ ದಾನ ಶ್ರೇಷ್ಠವಾಗಿದೆ. ಪದೇ ಪದೇ ಕೊಡಬಹುದಾಗಿದೆ. ವೈದ್ಯ ವಿಜ್ಞಾನವು ಎಷ್ಟೇ ಮುಂದುವರಿದರೂ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾದ್ಯವಾಗುತ್ತಿಲ್ಲ. ಮಾನವನಿಂದ ಮಾನವನಿಗೆ ಮಾತ್ರ ಕೊಡಬಹುದಾಗಿದೆ. ಸ್ವಯಂಪ್ರೇರಿತವಾಗಿ ಮುಂದೆ ಬರಬೇಕು’ ರಕ್ತ ದಾನ ಮಾಡುವದನ್ನು ಪ್ರೇರೇಪಿಸಬೇಕಾಗಿದೆ ಎಂದರು.</p>.<p>ವೈದ್ಯರಾದ ಡಾ.ಮಹಮ್ಮದ್ಜಿಯಾ ಗುತ್ತಿ, ಡಾ.ಕೃಷ್ಣ ಟಿ.ಜಿ., ಡಾ.ಪ್ರೇಮಾ ಮೆನಶಿ, ಸಾರ್ವಜನಿಕ ಸಂಪರ್ಕಾಧಿಕಾರಿ ಸಂತೋಷ ಇತಾಪೆ, ರಕ್ತ ದಾನಿಗಳಾದ ಈರಣ್ಣ ಕಲ್ಲೊಳ್ಳಿ ಹಾಗೂ ಬಸವರಾಜ ಅಷ್ಟೇಕರ, ತಂತ್ರಜ್ಞ ಮಹಾದೇವ ವಾಲಿಶೆಟ್ಟಿ ಇದ್ದರು.</p>.<p>11 ಮಂದಿ ರಕ್ತ ದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ರಕ್ತ ದಾನದಿಂದ ನಮ್ಮ ದೇಹದಲ್ಲಿನ ರಕ್ತ ಕಡಿಮೆಯಾಗುತ್ತದೆ. ಶಕ್ತಿ ಕುಂದುತ್ತದೆ ಎನ್ನುವುದು ತಪ್ಪು ಕಲ್ಪನೆಯಾಗಿದೆ’ ಎಂದು ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ತಿಳಿಸಿದರು.</p>.<p>ಆಸ್ಪತ್ರೆಯಲ್ಲಿ ಭಾನುವಾರ ನಡೆದ ವಿಶ್ವ ರಕ್ತ ದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದಾನಗಳಲ್ಲಿ ರಕ್ತ ದಾನ ಶ್ರೇಷ್ಠವಾಗಿದೆ. ಪದೇ ಪದೇ ಕೊಡಬಹುದಾಗಿದೆ. ವೈದ್ಯ ವಿಜ್ಞಾನವು ಎಷ್ಟೇ ಮುಂದುವರಿದರೂ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾದ್ಯವಾಗುತ್ತಿಲ್ಲ. ಮಾನವನಿಂದ ಮಾನವನಿಗೆ ಮಾತ್ರ ಕೊಡಬಹುದಾಗಿದೆ. ಸ್ವಯಂಪ್ರೇರಿತವಾಗಿ ಮುಂದೆ ಬರಬೇಕು’ ರಕ್ತ ದಾನ ಮಾಡುವದನ್ನು ಪ್ರೇರೇಪಿಸಬೇಕಾಗಿದೆ ಎಂದರು.</p>.<p>ವೈದ್ಯರಾದ ಡಾ.ಮಹಮ್ಮದ್ಜಿಯಾ ಗುತ್ತಿ, ಡಾ.ಕೃಷ್ಣ ಟಿ.ಜಿ., ಡಾ.ಪ್ರೇಮಾ ಮೆನಶಿ, ಸಾರ್ವಜನಿಕ ಸಂಪರ್ಕಾಧಿಕಾರಿ ಸಂತೋಷ ಇತಾಪೆ, ರಕ್ತ ದಾನಿಗಳಾದ ಈರಣ್ಣ ಕಲ್ಲೊಳ್ಳಿ ಹಾಗೂ ಬಸವರಾಜ ಅಷ್ಟೇಕರ, ತಂತ್ರಜ್ಞ ಮಹಾದೇವ ವಾಲಿಶೆಟ್ಟಿ ಇದ್ದರು.</p>.<p>11 ಮಂದಿ ರಕ್ತ ದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>