ಸೆಲ್ಕೋ ಸೋಲಾರ್ನ ಸಿಇಒ ಮೋಹನ ಭಾಸ್ಕರ ಹೆಗಡೆ, ಬಿಜೆಪಿ ಮುಖಂಡ ಅರವಿಂದ ಪಾಟೀಲ ಮಾತನಾಡಿದರು. ಕಾಹೇರ್ ಕುಲಸಚಿವ ಡಾ. ವಿ.ಎ. ಕೋಠಿವಾಲೆ ಅಧ್ಯಕ್ಷತೆ ವಹಿಸಿದ್ದರು. ಎಸ್ಬಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಡಿವೇಶ ಅರಕೇರಿ, ಡಾ. ರವಿ ಪಾಟೀಲ, ಡಾ. ಕಿರಣ ಖೋತ್ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇದ್ದರು. ವಿನಾಯಕ ಹೆಗಡೆ ಸ್ವಾಗತಿಸಿದರು. ಸುಬ್ರಹ್ಮಣ್ಯ ಭಟ್ ನಿರೂಪಿಸಿದರು. ಬಿ. ಎಂ. ಕಂಕಣವಾಡಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಸುಹಾಸ ಶೆಟ್ಟಿ ವಂದಿಸಿದರು.