ಬೆಳಗಾವಿ: ‘ದೀನ–ದುರ್ಬಲರ ಸೇವೆ ಪರಮಾತ್ಮನ ಸೇವೆ. ಅದರಲ್ಲೇ ದೇವರನ್ನು ಕಾಣಬೇಕು’ ಎಂದು ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ತಿಳಿಸಿದರು.
ನಗರದ ದೇವರಾಜ ಅರಸು ಬಡಾವಣೆಯ ಚಿನ್ನಮ್ಮ ಹಿರೇಮಠ ವೃದ್ಧಾಶ್ರಮದ ಸಭಾಂಗಣದಲ್ಲಿ ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟಬಲ್ ಟ್ರಸ್ಟ್ ಹಾಗೂ ಮಹಾಂತ ಟ್ರೇಡರ್ಸ್ ವತಿಯಿಂದ ವೈದ್ಯಕೀಯ ಕೋರ್ಸ್ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸನ್ಮಾನ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
‘ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಕಲಿಕಾ ಅವಧಿಯಲ್ಲಿ ಉತ್ತಮ ಅಭ್ಯಾಸ ರೂಢಿಸಿಕೊಂಡು ಮುಂಬರುವ ದಿನಗಳಲ್ಲಿ ಯಶಸ್ವಿ ವೈದ್ಯರಾಗಿ ಸಮಾಜಮುಖಿ ಚಟುಚಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.