<p><strong>ಬೆಳಗಾವಿ:</strong> ಗಡಿ ವಿವಾದದ ವಿಷಯ ಇದೆ ಎನ್ನಲಾದ ‘ಪಾಲೋವರ್’ ಕನ್ನಡ ಚಲನಚಿತ್ರ ಪ್ರದರ್ಶನಕ್ಕೆ, ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರು ತಡೆಯೊಡ್ಡಿದರು.</p> <p>ಇಲ್ಲಿನ ಐನಾಕ್ಸ್ ಮಲ್ಪಿಫ್ಲೆಕ್ಸ್ನಲ್ಲಿ ಶುಕ್ರವಾರ ರಾತ್ರಿ 8ಕ್ಕೆ ಇದರ ಮೊದಲ ಪ್ರದರ್ಶನವಿತ್ತು. ಚಲನಚಿತ್ರದಲ್ಲಿ ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ವಿಷಯ ಎತ್ತಲಾಗಿದೆ ಎಂದು ಆರೋಪಿಸಿ ಪ್ರದರ್ಶನಕ್ಕೆ ಅಡ್ಡಿಪಡಿಸಲಾಯಿತು.</p> <p>ಬಿಇ ಪದವೀಧರ ಹರ್ಷದ್ ನಲವಡೆ ಈ ಚಿತ್ರ ನಿರ್ಮಿಸಿದ್ದಾರೆ. ಸಿನಿಮಾದ ಟ್ರೈಲರ್ನಲ್ಲಿ ‘ಯಳ್ಳೂರು– ಮಹಾರಾಷ್ಟ್ರ ರಾಜ್ಯ’ ಎಂಬ ಬೋರ್ಡ್ ತೋರಿಸಲಾಗಿದೆ. ಇದನ್ನು ಗಮನಿಸಿ ಕರವೇ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಈ ವೇಳೆ ಚಿತ್ರಮಂದಿರದ ಸಿಬ್ಬಂದಿ ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.</p> <p>ಈ ಆರೋಪ ತಳ್ಳಿಹಾಕಿದ ಚಿತ್ರತಂಡದವರು, ‘ನಾವು ಕನ್ನಡಿಗರೇ ಆಗಿದ್ದೇವೆ. ಕನ್ನಡದಲ್ಲೇ ಸಿನಿಮಾ ಮಾಡಿದ್ದೇವೆ. ಇದರಲ್ಲಿ ಗಡಿ ವಿವಾದದ ಯಾವುದೇ ವಿಷಯ ಇಲ್ಲ. ಏಳು ವರ್ಷ ಕಷ್ಟಪಟ್ಟು ಚಿತ್ರ ನಿರ್ಮಿಸಿದ್ದೇವೆ. ಹೋರಾಟಗಾರರು ಮೊದಲು ಚಿತ್ರ ವೀಕ್ಷಿಸಿ ನಂತರ ಹೋರಾಟ ಮಾಡಲಿ’ ಎಂದರು.</p> <p>ಖಡೇಬಜಾರ್ ಎಸಿಪಿ ಶೇಖರಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಚಿತ್ರ ಪ್ರದರ್ಶನ ರದ್ದಾದ ಕಾರಣ, ಎಲ್ಲ ಪ್ರೇಕ್ಷಕರ ಹಣವನ್ನೂ ಮರಳಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಗಡಿ ವಿವಾದದ ವಿಷಯ ಇದೆ ಎನ್ನಲಾದ ‘ಪಾಲೋವರ್’ ಕನ್ನಡ ಚಲನಚಿತ್ರ ಪ್ರದರ್ಶನಕ್ಕೆ, ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರು ತಡೆಯೊಡ್ಡಿದರು.</p> <p>ಇಲ್ಲಿನ ಐನಾಕ್ಸ್ ಮಲ್ಪಿಫ್ಲೆಕ್ಸ್ನಲ್ಲಿ ಶುಕ್ರವಾರ ರಾತ್ರಿ 8ಕ್ಕೆ ಇದರ ಮೊದಲ ಪ್ರದರ್ಶನವಿತ್ತು. ಚಲನಚಿತ್ರದಲ್ಲಿ ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ವಿಷಯ ಎತ್ತಲಾಗಿದೆ ಎಂದು ಆರೋಪಿಸಿ ಪ್ರದರ್ಶನಕ್ಕೆ ಅಡ್ಡಿಪಡಿಸಲಾಯಿತು.</p> <p>ಬಿಇ ಪದವೀಧರ ಹರ್ಷದ್ ನಲವಡೆ ಈ ಚಿತ್ರ ನಿರ್ಮಿಸಿದ್ದಾರೆ. ಸಿನಿಮಾದ ಟ್ರೈಲರ್ನಲ್ಲಿ ‘ಯಳ್ಳೂರು– ಮಹಾರಾಷ್ಟ್ರ ರಾಜ್ಯ’ ಎಂಬ ಬೋರ್ಡ್ ತೋರಿಸಲಾಗಿದೆ. ಇದನ್ನು ಗಮನಿಸಿ ಕರವೇ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಈ ವೇಳೆ ಚಿತ್ರಮಂದಿರದ ಸಿಬ್ಬಂದಿ ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.</p> <p>ಈ ಆರೋಪ ತಳ್ಳಿಹಾಕಿದ ಚಿತ್ರತಂಡದವರು, ‘ನಾವು ಕನ್ನಡಿಗರೇ ಆಗಿದ್ದೇವೆ. ಕನ್ನಡದಲ್ಲೇ ಸಿನಿಮಾ ಮಾಡಿದ್ದೇವೆ. ಇದರಲ್ಲಿ ಗಡಿ ವಿವಾದದ ಯಾವುದೇ ವಿಷಯ ಇಲ್ಲ. ಏಳು ವರ್ಷ ಕಷ್ಟಪಟ್ಟು ಚಿತ್ರ ನಿರ್ಮಿಸಿದ್ದೇವೆ. ಹೋರಾಟಗಾರರು ಮೊದಲು ಚಿತ್ರ ವೀಕ್ಷಿಸಿ ನಂತರ ಹೋರಾಟ ಮಾಡಲಿ’ ಎಂದರು.</p> <p>ಖಡೇಬಜಾರ್ ಎಸಿಪಿ ಶೇಖರಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಚಿತ್ರ ಪ್ರದರ್ಶನ ರದ್ದಾದ ಕಾರಣ, ಎಲ್ಲ ಪ್ರೇಕ್ಷಕರ ಹಣವನ್ನೂ ಮರಳಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>